ಆ್ಯಪ್ನಗರ

ಬಳ್ಳಾರಿಯಲ್ಲಿ ಯಾವುದೇ ಬಣ ಇಲ್ಲ: ಸತೀಶ್‌ ಜಾರಕಿಹೊಳಿ

ಬೆಳಗಾವಿ: 'ಬಳ್ಳಾರಿಯಲ್ಲಿ ಡಿಕೆಶಿ, ಜಾರಕಿಹೊಳಿ ಎನ್ನುವ ಯಾವುದೇ ಬಣ ಇಲ್ಲ ಅಲ್ಲಿ ಇಂಥವರಿಗೆ ಟಿಕೆಟ್‌ ಕೊಡಿ ಎಂದು ಕೇಳಿಲ್ಲ...

Vijaya Karnataka 15 Oct 2018, 5:00 am
ಬೆಳಗಾವಿ: 'ಬಳ್ಳಾರಿಯಲ್ಲಿ ಡಿಕೆಶಿ, ಜಾರಕಿಹೊಳಿ ಎನ್ನುವ ಯಾವುದೇ ಬಣ ಇಲ್ಲ. ಅಲ್ಲಿ ಇಂಥವರಿಗೆ ಟಿಕೆಟ್‌ ಕೊಡಿ ಎಂದು ಕೇಳಿಲ್ಲ. ಯಾರಿಗೆ ಟಿಕೆಟ್‌ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇವೆ' ಎಂದು ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.
Vijaya Karnataka Web there is no faction in bellary satish jarakiholi
ಬಳ್ಳಾರಿಯಲ್ಲಿ ಯಾವುದೇ ಬಣ ಇಲ್ಲ: ಸತೀಶ್‌ ಜಾರಕಿಹೊಳಿ


ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ''ಬಳ್ಳಾರಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಅಸಮಾಧಾನ ಇರಬಹುದು. ಅದನ್ನೆಲ್ಲ ಮುಖಂಡರು ಸರಿಮಾಡುವ ಪ್ರಯತ್ನ ಮಾಡುತ್ತಾರೆ. ಮುಖಂಡರ ಅಸಮಾಧಾನ ಚುನಾವಣೆ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ'', ಎಂದು ಡಿಕೆಶಿ ಬಳ್ಳಾರಿಗೆ ಬಂದಾಗ ಕಾಂಗ್ರೆಸ್‌ ಮುಖಂಡರು ಗೈರು ಹಾಜರಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿದರು.

''ಉಪಚುನಾವಣೆಯಲ್ಲಿ ಸೀಟು ಹಂಚಿಕೆಯ ಅಂತಿಮ ತೀರ್ಮಾನ ಹೈಕಮಾಂಡ್‌ಗೆ ಬಿಟ್ಟಿದ್ದು. ಮಂಡ್ಯದಲ್ಲಿ ಜೆಡಿಎಸ್‌ ಪ್ರಬಲವಾಗಿದೆ. ಅದಕ್ಕೆ ಅಲ್ಲಿ ಬಿಟ್ಟು ಕೊಟ್ಟಿದ್ದೇವೆ. ಅವರು ಟಿಕೆಟ್‌ ಕೊಟ್ಟರೆ ಶಿವಮೊಗ್ಗದಲ್ಲಿ ನಮ್ಮ ಅಭ್ಯರ್ಥಿ ಸ್ಪರ್ಧೆ ಮಾಡುತ್ತಾರೆ'', ಎಂದ ಅವರು, ತಾವು ಜಮಖಂಡಿ ಹಾಗೂ ಬಳ್ಳಾರಿಯಲ್ಲಿ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದರು.

''ಉಪಚುನಾವಣೆ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಟ್ಟರೆ ಸ್ವಾಗತ. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಹೈಕಮಾಂಡ್‌ನಿಂದ ಯಾವುದೇ ಸೂಚನೆ ಬಂದಿಲ್ಲ. ಇನ್ನೂ ಚರ್ಚೆ ನಡೆಯುತ್ತಿದೆ, ಎಲ್ಲ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ'', ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಎಪಿಎಂಸಿಗೆ ಅವಿರೋಧ: ''ಬೆಳಗಾವಿ ಎಪಿಎಂಸಿಯ ಎಲ್ಲ ಸದಸ್ಯರು ಒಗ್ಗಟ್ಟಾಗಿ ಇದ್ದಾರೆ. ಪಕ್ಷ, ಗುಂಪು ಎನ್ನುವುದು ಯಾವುದೂ ಇಲ್ಲ. ಹಾಗಾಗಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುವ ಇರಾದೆ ಇದೆ'', ಎಂದು ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ''ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿಷಯವಾಗಿ ಮುಖಂಡರೊಂದಿಗೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕಳೆದ ಬಾರಿ ನಡೆದ ತುರುಸಿನ ಪೈಪೋಟಿ ಈ ಬಾರಿ ಆಗುವುದಿಲ್ಲ'', ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ