ಆ್ಯಪ್ನಗರ

ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ಧಿವಾದ ಹೇಳುವ ಅವಶ್ಯಕತೆ ಇಲ್ಲ; ಸತೀಶ್ ಜಾರಕಿಹೊಳಿ

ಲಖನ್ ಬಗ್ಗೆ ನಾವು ಈಗಾಗಲೇ ಏನು ಮಾತನಾಡಬೇಕಿತ್ತೋ ಮಾತನಾಡಿದ್ದೇವೆ ಎಂದ ಸತೀಶ್ ಜಾರಕಿಹೊಳಿ, ಲಖನ್ ಗೂ ನಮ್ಮ ಪಕ್ಷಕ್ಕೂ ಸಂಬಂಧ ಇಲ್ಲ. ನಾವು ಚುನಾವಣೆ ಮಾಡುತ್ತಿರುವುದು ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿ ಲಖನ್ ವಿರುದ್ಧ. ಈ ಚುನಾವಣೆಯಲ್ಲಿ ಕುಟುಂಬ ವಿಷಯ ತರುವುದು ಸರಿಯಲ್ಲ ಎಂದರು.

Vijaya Karnataka Web 3 Dec 2021, 12:44 pm
ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿಯಿಂದ ಇಬ್ಬರು ಅಭ್ಯರ್ಥಿಗಳನ್ನು ಗೆಲ್ಲಿಸಲು ಸಾಧ್ಯವಾಗುವುದಿಲ್ಲ. ಅವರೇನಿದ್ದರೂ ಒಬ್ಬ ಅಭ್ಯರ್ಥಿಯನ್ನು ಮಾತ್ರ ಗೆಲ್ಲಿಸಬಹುದಷ್ಟೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.
Vijaya Karnataka Web Sathish Jarkiholi


ಶುಕ್ರವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಒಂದು ಸುತ್ತಿನ ಪ್ರಚಾರ ಮುಗಿಸಿದ್ದೇವೆ. ಎರಡನೇ ಸುತ್ತಿನ ಪ್ರಚಾರ ಆರಂಭವಾಗಿದೆ. ಚುನಾವಣೆಗೂ ಮುಂಚೆಯೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎಂದರು. ಲಖನ್ ಬಗ್ಗೆ ನಾವು ಈಗಾಗಲೇ ಏನು ಮಾತನಾಡಬೇಕಿತ್ತೋ ಮಾತನಾಡಿದ್ದೇವೆ ಎಂದ ಸತೀಶ್ ಜಾರಕಿಹೊಳಿ, ಲಖನ್ ಗೂ ನಮ್ಮ ಪಕ್ಷಕ್ಕೂ ಸಂಬಂಧ ಇಲ್ಲ. ನಾವು ಚುನಾವಣೆ ಮಾಡುತ್ತಿರುವುದು ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿ ಲಖನ್ ವಿರುದ್ಧ. ಈ ಚುನಾವಣೆಯಲ್ಲಿ ಕುಟುಂಬ ವಿಷಯ ತರುವುದು ಸರಿಯಲ್ಲ ಎಂದರು.
ದುಡ್ಡು ಇರೋರನ್ನು ಹುಡುಕಿ ಜನಪ್ರತಿನಿಧಿಗಳನ್ನು ಕೊಂಡುಕೊಳ್ಳುವ ಕೆಲಸವನ್ನು ಕಾಂಗ್ರೆಸ್‌ ಮಾಡ್ತಿದೆ; ಈಶ್ವರಪ್ಪ ಕಿಡಿ
ಇನ್ನು ಈ ಬಾರಿಯ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಮತಗಳನ್ನು ಈಗಾಗಲೇ ‌ನಾವು ಭದ್ರಪಡಿಸಿಕೊಂಡಿದ್ದೇವೆ ಎಂದರು. ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ಧಿವಾದ ಹೇಳುವ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿಯೇ ಗೊಂದಲಗಳನ್ನು ಮೊದಲು ಸರಿಪಡಿಸಿಕೊಳ್ಳಲಿ. ಒಂದೇ ವೇದಿಕೆಯಲ್ಲಿ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಾರೆ. ಮೊದಲು ಅದನ್ನು ಸರಿಪಡಿಸಿಕೊಳ್ಳಲಿ ಎಂದರು. ಇನ್ನು ಡಿಕೆ ಶಿವಕುಮಾರ್ ದೊಡ್ಡ ಸಾಹುಕಾರ್ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ರಾಜಕೀಯವಾದ ಹೇಳಿಕೆ. ಅದನ್ನು ನಮ್ಮ ತಲೆ ಮೇಲೆ ಯಾಕೆ ತೆಗೆದುಕೊಳ್ಳುವುದು ಎಂದು ಪ್ರತಿಕ್ರಿಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ