ಆ್ಯಪ್ನಗರ

ಬೆಳಗಾವಿ: ರಸ್ತೆ ಬದಿ ನಿಲ್ಲಿಸುತ್ತಿದ್ದ ಬೈಕ್‌ಗಳನ್ನು ಕದಿಯುತ್ತಿದ್ದ ಮೂವರು ಆರೋಪಿಗಳ ಬಂಧನ

ಬೆಳಗಾವಿ: ರಸ್ತೆ ಬದಿ ನಿಲ್ಲಿಸುತ್ತಿದ್ದ ಬೈಕ್‌ಗಳನ್ನು ಕದಿಯುತ್ತಿದ್ದ

Vijaya Karnataka 17 Jul 2020, 5:00 am
ಬೆಳಗಾವಿ: ರಸ್ತೆ ಬದಿ ನಿಲ್ಲಿಸುತ್ತಿದ್ದ ಬೈಕ್‌ಗಳನ್ನು ಕದಿಯುತ್ತಿದ್ದ ಮೂವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web 16LBS12083726
ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧಿಸಿರುವ ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರು.


ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದ ಅಕ್ಷಯ ಶಂಕರ ಚೌಗಲೆ (22), ಬಸವನಕುಡಚಿ ಗ್ರಾಮದ ಮಹೇಶ ಭಾವುಕ ಅನಗೋಳಕರ್‌( 19) ಮತ್ತು ಆಕಾಶ ಭಾವುಕ ಅನಗೋಳಕರ್‌ (21) ಬಂಧಿತರು.

ಗ್ರಾಮೀಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿಗುರುವಾರ ಬೆಳಗ್ಗೆ ಸಂಶಾಸ್ಪದವಾಗಿ ಸಂಚರಿಸುತ್ತಿದ್ದ ಆರೋಪಿತರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಭಾರಿ ಪ್ರಮಾಣದಲ್ಲಿದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿರುವುದು ತಿಳಿದು ಬಂದಿದೆ. ಸದ್ಯ 18 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಿ ಕಾರಾಗೃಹಕ್ಕೆ ಕಳುಹಿಸಿದ್ದಾರೆ.

ಗ್ರಾಮೀಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ9 ಬೈಕ್‌ ಕಳ್ಳತನ ಪ್ರಕರಣ ದಾಖಲಾಗುತ್ತಿದ್ದಂತೆ ವಿಶೇಷ ತಂಡ ರಚಿಸಿದ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಈ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರು 6.50 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳಿಗೆ ಸೇರಿದ ಒಟ್ಟು 18 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ. ಈ ಪೈಕಿ ಬಹುತೇಕ ಬೈಕ್‌ಗಳು ರೈತರಿಗೆ ಸೇರಿವೆ. ಖಾನಾಪುರ, ಶಹಾಪುರ, ಮಾಳಮಾರುತಿ, ಕ್ಯಾಂಪ್‌ ಸೇರಿದಂತೆ ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲೂಇವರು ಬೈಕ್‌ ಕಳ್ಳತನ ಮಾಡಿರುವುದು ವಿಚಾರಣೆಯಲ್ಲಿತಿಳಿದು ಬಂದಿದೆ.

ಪೊಲೀಸ್‌ ಆಯುಕ್ತರು, ಉಪ ಆಯುಕ್ತರ ಮಾರ್ಗದರ್ಶನದಲ್ಲಿಗ್ರಾಮೀಣ ಠಾಣೆ ಪಿಐ ಸುನೀಲಕುಮಾರ ನಂದೇಶ್ವರ, ಪಿಎಸ್‌ಐ ಆನಂದ ಅದಕೊಂಡ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಎಸಿಪಿ ಮಹಾಂತೇಶ್ವರ ಜಿದ್ದಿ ಮಾಹಿತಿ ನೀಡಿದ್ದಾರೆ.

ಕದ್ದ ಬೈಕ್‌ಗಳು ಅರಣ್ಯದಲ್ಲಿ

ಮಾರ್ಚ್ ತಿಂಗಳಲ್ಲಿಲಾಕ್‌ಡೌನ್‌ ತೆರವಾಗುತ್ತಿದ್ದಂತೆ ಬೈಕ್‌ ಕಳ್ಳತನ ಆರಂಭಿಸಿದ್ದರು. ವಿಶೇಷವಾಗಿ ಬೆಳಗಾವಿ ಗ್ರಾಮೀಣ ಪ್ರದೇಶಗಳಾದ ರಾಜಹಂಸಗಡ, ನಂದಿಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮ ವ್ಯಾಪಿಯಲ್ಲಿ ಹೊಲಗದ್ದೆಗಳಿಗೆ ತೆರಳುವ ರೈತರು ಬೈಕ್‌ಗಳನ್ನು ರಸ್ತೆ ಬದಿ ನಿಲ್ಲಿಸುವುದು ಸಾಮಾನ್ಯ. ಅಂತಹ ಬೈಕ್‌ಗಳನ್ನು ಟಾರ್ಗೆಟ್‌ ಮಾಡಿ ಕಳ್ಳತನ ಮಾಡುತ್ತಿದ್ದರು. ಅಲ್ಲದೆ, ರಾಜಹಂಸಗಡ ವೀಕ್ಷಣೆಗೆ ಬರುವವರು ಪಾರ್ಕ್ ಮಾಡುತ್ತಿದ್ದ ಬೈಕ್‌ಗಳನ್ನೂ ಕಳ್ಳತನ ಮಾಡುತ್ತಿದ್ದರು. ಹೀಗೆ ಕಳ್ಳತನ ಮಾಡಿದ ಎಲ್ಲಬೈಕ್‌ಗಳನ್ನು ಖಾನಾಪುರ ತಾಲೂಕಿನ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿಇಟ್ಟಿದ್ದರು. ಕದ್ದ ಬೈಕ್‌ಗಳ ಪೈಕಿ ಎರಡು ಬೈಕ್‌ಗಳನ್ನು ಗುರುವಾರ ಮಾರಾಟ ಮಾಡಲು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿಪೊಲೀಸರ ಬಲೆಗೆ ಬಿದ್ದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ