ಆ್ಯಪ್ನಗರ

ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರ ಸಾವು

ಬೆಳಗಾವಿ: ಬೆಳಗಾವಿ- ಗೋವಾ ಹೆದ್ದಾರಿ ಕಾಮಗಾರಿ ಸಂದರ್ಭದಲ್ಲಿ ...

Vijaya Karnataka 28 May 2019, 5:00 am
ಬೆಳಗಾವಿ : ಬೆಳಗಾವಿ- ಗೋವಾ ಹೆದ್ದಾರಿ ಕಾಮಗಾರಿ ಸಂದರ್ಭದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
Vijaya Karnataka Web BLG-2705-2-52-27ROAD1


ಸೋಮವಾರ ಮಧ್ಯಾಹ್ನ ತಾಲೂಕಿನ ದೇಸೂರ ಬಳಿ ದುರ್ಘಟನೆ ಸಂಭವಿಸಿದ್ದು, ಜಾರ್ಖಂಡ್‌ ರಾಜ್ಯದ ಪಲಾಮಾ ಜಿಲ್ಲೆಯ ಕಾರ್ಮಿಕರಾದ ಅರ್ಜುನ ಸಿಂಗ್‌ (21), ದುರ್ಗೆಶ ಕುಮಾರ (22) ಮತ್ತು ಸುಖನ್‌ ರಾಮ ಮೃತಪಟ್ಟಿದ್ದಾರೆ.

ಹೆದ್ದಾರಿ ಕಾಮಗಾರಿಯಲ್ಲಿ ಜಾರ್ಖಂಡ್‌, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ಕಾರ್ಮಿಕರು ಕೆಲಸ ಮಾಡುತ್ತಿದ್ದು, ತಾಲೂಕಿನ ದೇಸೂರ ಗ್ರಾಮದ ಬಳಿ ರಸ್ತೆಗೆ ಅಡ್ಡವಾಗಿ ಸೇತುವೆ ಕಾಮಗಾರಿ ನಡೆಯುತ್ತಿತ್ತು. ಸೇತುವೆ ನಿರ್ಮಾಣಕ್ಕೆಂದು ಹಾಕಿ ಸ್ಪ್ಯಾಬ್‌ ಕಂಬ ತೆರವುಗೊಳಿಸುವ ಸಂದರ್ಭದಲ್ಲಿ ಪಕ್ಕದಲ್ಲಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಮಣ್ಣು ಕಾರ್ಮಿಕರ ಮೇಲೆ ಕುಸಿದಿದೆ. ಒಟ್ಟು 10 ಕಾರ್ಮಿಕರು ಸ್ಥಳದಲ್ಲಿದ್ದರಾದರೂ ಮೂವರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದರು. ಈ ಮೂವರು ಕಾರ್ಮಿಕರು ಸುಮಾರು 35 ಅಡಿ ಆಳದಲ್ಲಿ ಮಣ್ಣಿನ ಕೆಳಗೆ ಸಿಲುಕಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಖಾನಾಪುರ ಮತ್ತು ಬೆಳಗಾವಿ ನಗರದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಮೂಲಕ ಕಾರ್ಮಿಕರ ದೇಹಗಳನ್ನು ಹೊರ ತೆಗೆದಿದ್ದಾರೆ.

ಗುತ್ತಿಗೆದಾರನ ವಿರುದ್ಧ ಎಫ್‌ಐಆರ್‌ :
ಸೇತುವೆ ನಿರ್ಮಾಣಕ್ಕೆಂದು ತೆಗೆದ ಭಾರಿ ಪ್ರಮಾಣದ ಮಣ್ಣನ್ನು ಸರಿಯಾಗಿ ಸಂಗ್ರಹ ಮಾಡದಿರುವುದೇ ಮಣ್ಣು ಕುಸಿತಕ್ಕೆ ಕಾರಣವಾಗಿದೆ. ಇದೇ ಕಾರಣದಿಂದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಗುತ್ತಿಗೆದಾರ ಹಾಗೂ ಕಾಮಗಾರಿ ಮೇಲ್ವಿಚಾರಕರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಸೀಮಾ ಲಾಟ್ಕರ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ