ಆ್ಯಪ್ನಗರ

ತಂಬಾಕು ಸೇವನೆ ಮಾರಣಾಂತಿಕ ಕಾಯಿಲೆಗೆ ಆಹ್ವಾನ

ಹುಕ್ಕೇರಿ: ತಂಬಾಕು ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜತೆಗೆ ಮಾರಣಾಂತಿಕ ಕಾಯಿಲೆಗೆ ಆಹ್ವಾನ ನೀಡುತ್ತದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ...

Vijaya Karnataka 1 Jun 2018, 5:00 am
ಹುಕ್ಕೇರಿ: ತಂಬಾಕು ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜತೆಗೆ ಮಾರಣಾಂತಿಕ ಕಾಯಿಲೆಗೆ ಆಹ್ವಾನ ನೀಡುತ್ತದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಉದಯ ಕುಡಚಿ ಹೇಳಿದರು.
Vijaya Karnataka Web BEL-31HUKKERI 01


ಅವರು ಪಟ್ಟಣದಲ್ಲಿ ಗುರುವಾರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತದ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಇಂದಿನ ಯುವ ಪೀಳಿಗೆ ತಂಬಾಕು, ಗುಟಕಾ, ಮದ್ಯಪಾನ, ಧೂಮಪಾನ ಹೀಗೆ ಹಲವು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅವರ ಕುಟುಂಬಗಳು ಬೀದಿಗೆ ಬರುತ್ತಿವೆ. ಸರಕಾರ ಇವುಗಳಿಗೆ ಕಡಿವಾಣ ಹಾಕುವ ಹಲವು ಯೋಜನೆಗಳನ್ನು ಜಾರಿಗೆ ತಂದರೂ ಯುವಕರ ನಿರ್ಲಕ್ಷ್ಯದಿಂದ ಅವು ಯಶಸ್ವಿಯಾಗುತ್ತಿಲ್ಲ ಎಂದು ವಿಷಾದಿಸಿದರು.

ಈ ಸಂದರ್ಭದಲ್ಲಿ ಡಿ.ಟಿ. ಪಾಟೀಲ, ಡಿ.ಟಿ. ಪಾಟೀಲ, ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಜಗದೀಶ ತುಬಚಿ, ಡಾ. ಎಂ.ಸಿ. ವಿಜಾಪುರೆ, ಡಾ. ವಿನೋದಕುಮಾರ, ಡಾ. ಪ್ರಕಾಶ ಬಟನೂರ, ಸತೀಶ ಚೌಗಲಾ ಮತ್ತಿತರರು ಪಾಲ್ಗೊಂಡಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ