ಆ್ಯಪ್ನಗರ

ಇಂದು ರೈತರಿಂದ ಎಸಿ ಕಚೇರಿಗೆ ಮುತ್ತಿಗೆ

ಬೈಲಹೊಂಗಲ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ರೈತರು ಬೆಳೆದ ಹೆಸರಿಗೆ ಕನಿಷ್ಠ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‌ಗೆ 6975 ರೂ...

Vijaya Karnataka 24 Aug 2018, 5:00 am
ಬೈಲಹೊಂಗಲ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ರೈತರು ಬೆಳೆದ ಹೆಸರಿಗೆ ಕನಿಷ್ಠ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‌ಗೆ 6975 ರೂ. ಘೋಷಣೆ ಮಾಡಿದೆ. ಈ ಬೆಲೆಯಲ್ಲಿ ಹೆಸರು ಖರೀದಿಸಲು, ಖರೀದಿ ಕೇಂದ್ರ ತೆರೆಯುವಂತೆ ಸರಕಾರದ ಮೇಲೆ ಒತ್ತಡ ತರಲು ಆ.24 ರಂದು ಬೆಳಗ್ಗೆ 11ಕ್ಕೆ ಉಪವಿಭಾಗಾಧಿಕಾರಿಗಳ ಕಚೇರಿಗೆ ರೈತರಿಂದ ಮುತ್ತಿಗೆ ಹಾಕಲಾಗುವುದೆಂದು ಭಾರತೀಯ ಕೃಷಿಕ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಮಹಾಂತೇಶ ಕಮತ ಹೇಳಿದರು.
Vijaya Karnataka Web BEL-23HTP4


ಪಟ್ಟಣದ ಚನ್ನಮ್ಮ ಸಮಾಧಿ ರಸ್ತೆಯಲ್ಲಿರುವ ರೈತ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ರೈತರನ್ನು ಆರ್ಥಿಕವಾಗಿ ಸದೃಢ ಮಾಡಲು ಬೆಂಬಲ ಬೆಲೆ ಘೋಷಣೆ ಮಾಡಿದೆ. ಆದರೆ, ಖರೀದಿ ಕೇಂದ್ರ ತೆರೆಯದೆ ರೈತರಿಗೆ ಸರಕಾರ ಅನ್ಯಾಯವೆಸುತ್ತಿದೆ ಎಂದು ಕಿಡಿಕಾರಿದರು ಮತ್ತು ತಕ್ಷ ಣ ಬೈಲಹೊಂಗಲ, ಸವದತ್ತಿ, ರಾಮದುರ್ಗ ತಾಲೂಕುಗಳಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭಿಸಿ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ಸರಕಾರವನ್ನು ಒತ್ತಾಯಿಸಲು ಎಸಿ ಕಚೇರಿ ಮುಂದೆ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.

ರೈತ ಮುಖಂಡರಾದ ಎಫ್‌.ಎಸ್‌. ಸಿದ್ಧನಗೌಡರ, ಮಾರುತಿ ತಿಗಡಿ, ಸುರೇಶ ಹೊಳಿ, ಮಡಿವಾಳಪ್ಪ ತಳವಾರ, ಶಿವು ಶಿರಸಂಗಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ