ಆ್ಯಪ್ನಗರ

ಇಂದು ಸುರೇಶ್‌ ಅಂಗಡಿ ಶಕ್ತಿ ಪ್ರದರ್ಶನ

ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್‌ ಅಂಗಡಿ ಗುರುವಾರ ನಗರದಲ್ಲಿ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದ್ದು, ಇದೇ ವೇಳೆ

Vijaya Karnataka 4 Apr 2019, 5:00 am
ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್‌ ಅಂಗಡಿ ಗುರುವಾರ ನಗರದಲ್ಲಿ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದ್ದು, ಇದೇ ವೇಳೆ ನಾಮಪತ್ರದ ಎರಡನೇ ಪ್ರತಿಯನ್ನು ಚುನಾವಣೆ ಅಧಿಕಾರಿಗಳಿಗೆ ಸಲ್ಲಿಸಲಿದ್ದಾರೆ.
Vijaya Karnataka Web BLG-0304-2-52-3PRAMOD1


ಬುಧವಾರ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ ಈ ಕುರಿತು ಮಾಹಿತಿ ನೀಡಿದರು.

''ಸುರೇಶ್‌ ಅಂಗಡಿ ಅವರು ಬೆಳಗ್ಗೆ 10 ಗಂಟೆಗೆ ಬಿಜೆಪಿ ಕಚೇರಿಯಿಂದ ಸಮಾದೇವಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಅಲ್ಲಿಂದ ಖಡೇಬಜಾರ್‌, ಕಾಕತಿವೇಸ್‌, ಚನ್ನಮ್ಮ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್‌ ಮೆರವಣಿಗೆ ನಡೆಯಲಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ್‌ ಸೇರಿದಂತೆ ಸ್ಥಳೀಯ ಮುಖಂಡರು ಈ ವೇಳೆ ಉಪಸ್ಥಿತರಿರುವರು. ಸುಮಾರು 10 ಸಾವಿರ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ'', ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್‌ ಒಡೆದ ಮನೆ: ಬಿಜೆಪಿ ವಕ್ತಾರ, ವಕೀಲ ಎಂ.ಬಿ. ಜಿರಲಿ ಮಾತನಾಡಿ, ''ಬೆಳಗಾವಿ ಜಿಲ್ಲೆಯ ಎರಡೂ ಲೋಕಸಭೆ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ಹೇಳುತ್ತಿರುವ ಕಾಂಗ್ರೆಸ್‌ ನಾಯಕರು ಮೊದಲು ಒಂದೇ ವೇದಿಕೆಯಲ್ಲಿ ಬರಲಿ. ಬೆಳಗಾವಿಯಲ್ಲಿ ಕಾಂಗ್ರೆಸ್‌ ಒಡೆದ ಮನೆ ಆಗಿದೆ. ಕಾಂಗ್ರೆಸ್‌ ನಾಯಕರು ಒಂದೇ ವೇದಿಕೆಯಲ್ಲಿ ಬಂದರೆ ಜ್ಞಾನ ಪೀಠ ಪ್ರಶಸ್ತಿ ಕೊಡಬಹುದು'', ಎಂದು ಲೇವಡಿ ಮಾಡಿದರು.

ಸಂಸದ ಸುರೇಶ್‌ ಅಂಗಡಿ, ವಕೀಲ ಬಸವರಾಜ ರೊಟ್ಟಿ, ರಾಜು ಚಿಕ್ಕನಗೌಡರ ಹಾಜರಿದ್ದರು.

ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್‌ ದೇಶದ್ರೋಹ ಕಾಯ್ದೆ ರದ್ದು ಪಡಿಸುವುದಾಗಿ, ಕಾಶ್ಮೀರಕ್ಕೆ ನೀಡಿದ ಸೆಕ್ಷ ನ್‌ 370 ವಿಶೇಷ ಮಾನ್ಯತೆ ಮುಂದುವರಿಸುವುದಾಗಿ ಹೇಳಿದೆ. ಇದರಿಂದ ಪ್ರತ್ಯೇಕತಾವಾದಿಗಳು, ಮಾವೋವಾದಿಗಳನ್ನು ರಕ್ಷ ಣೆ ಮಾಡಲು ಅದು ಹೊರಟಿರುವುದು ಸ್ಪಷ್ಟ. ಬಿಜೆಪಿ 370 ಸೆಕ್ಷ ನ್‌ ರದ್ದು ಮಾಡುವ ನಿರ್ಧಾರಕ್ಕೆ ಬದ್ಧವಾಗಿದೆ.
- ಎಂ.ಬಿ. ಜಿರಲಿ, ಬಿಜೆಪಿ ವಕ್ತಾರ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ