ಆ್ಯಪ್ನಗರ

ಟ್ರ್ಯಾಕ್ಟರ್‌ಗೆ ಸುಂಕ; ಹಿರೇಬಾಗೇವಾಡಿ ಟೋಲ್‌ ನಾಕಾದಲ್ಲಿ ರೈತರ ಆಕ್ರೋಶ

ಹಿರೇಬಾಗೇವಾಡಿ: ಟ್ರ್ಯಾಕ್ಟರ್‌ಗಳಿಗೆ ಸುಂಕ ಪಾವತಿಸಲು ಸೂಚಿಸಿದ್ದರಿಂದ ...

Vijaya Karnataka 16 Apr 2019, 5:00 am
ಹಿರೇಬಾಗೇವಾಡಿ : ಟ್ರ್ಯಾಕ್ಟರ್‌ಗಳಿಗೆ ಸುಂಕ ಪಾವತಿಸಲು ಸೂಚಿಸಿದ್ದರಿಂದ ಆಕ್ರೋಶಗೊಂಡ ರೈತರು ಇಲ್ಲಿನ ಟೋಲ್‌ ನಾಕಾ ಸಿಬ್ಬಂದಿ ಜತೆ ವಾಗ್ವಾದ ನಡೆಸಿ, ರಸ್ತೆಗೆ ಅಡ್ಡಲಾಗಿ ಟ್ರ್ಯಾಕ್ಟರ್‌ ನಿಲ್ಲಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.
Vijaya Karnataka Web BLG-1504-2-52-15HBD3


ಸೋಮವಾರ ಮಧ್ಯಾಹ್ನ ರೈತರ ಟ್ರ್ಯಾಕ್ಟರ್‌ಗಳಿಗೆ ಸುಂಕ ನೀಡುವಂತೆ ಟೋಲ್‌ ನಾಕಾದ ಸಿಬ್ಬಂದಿ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ಎಂ.ಕೆ.ಹುಬ್ಬಳ್ಳಿ, ಚಿಕದಿನಕೊಪ್ಪ ಹಾಗೂ ಹಿರೇಮುನವಳ್ಳಿ ಕಡೆಯ ರೈತರು ತಮ್ಮ ಟ್ರ್ಯಾಕ್ಟರ್‌ಗಳನ್ನು ರಸ್ತೆಗೆ ಅಡ್ಡ ನಿಲ್ಲಿಸಿ ಟೋಲ್‌ ಸಿಬ್ಬಂದಿ ಜತೆ ವಾಗ್ವಾದಕ್ಕೆ ಮುಂದಾದರು.

ಟೋಲ್‌ ಕೇಂದ್ರ ಪ್ರಾರಂಭವಾದಾಗಿನಿಂದಲೂ ರೈತರು ತಮ್ಮ ಟ್ರ್ಯಾಕ್ಟರ್‌ಗಳಿಗೆ ಸುಂಕ ಕೊಡುತ್ತಿಲ್ಲ. ಇಂದೇಕೆ ಕೇಳುತ್ತಿದ್ದೀರಿ ಎಂದು ಪ್ರಶ್ನಿಸಿದರು. ಸ್ಥಳಕ್ಕೆ ಆಗಮಿಸಿದ ಕಬ್ಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಈರಪ್ಪ ಅರಳೀಕಟ್ಟಿ ಅವರು ವಾತಾವರಣ ತಿಳಿಗೊಳಿಸಿದರು. ರೈತರು ರಸ್ತೆಗೆ ಅಡ್ಡಲಾಗಿ ಟ್ರ್ಯಾಕ್ಟರ್‌ ನಿಲ್ಲಿಸಿದ್ದರಿಂದ ಕೆಲಹೊತ್ತು ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು ಸ್ಥಳಕ್ಕೆ ಆಗಮಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ