ಆ್ಯಪ್ನಗರ

ಮಳೆ, ಗಾಳಿಗೆ ಉರುಳಿದ ಮರ

ಖಾನಾಪುರ/ ಬೆಳಗಾವಿ ಖಾನಾಪುರ ಪಟ್ಟಣ ಹಾಗೂ ಸುತ್ತಮುತ್ತ ಭಾನುವಾರ ಸಂಜೆ ಸುರಿದ ಭಾರಿ ಮಳೆ, ಗಾಳಿಗೆ ಮರಗಳು ಉರುಳಿವೆ...

Vijaya Karnataka 4 Jun 2018, 5:00 am
ಖಾನಾಪುರ/ ಬೆಳಗಾವಿ: ಖಾನಾಪುರ ಪಟ್ಟಣ ಹಾಗೂ ಸುತ್ತಮುತ್ತ ಭಾನುವಾರ ಸಂಜೆ ಸುರಿದ ಭಾರಿ ಮಳೆ, ಗಾಳಿಗೆ ಮರಗಳು ಉರುಳಿವೆ. ತಾಲೂಕಿನ ಚಾಪಗಾಂವ ಗ್ರಾಮದ ಹೊರವಲಯದ ಮನೆಯೊಂದರ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಲಾಲವಾಡಿ, ಕೌಂದಲ್‌, ಯಡೋಗಾ ಮತ್ತಿತರ ಭಾಗದಲ್ಲಿ ಐದಾರು ಅಡಿ ಎತ್ತರಕ್ಕೆ ಬೆಳೆದಿದ್ದ ಕಬ್ಬು ಸಂಪೂರ್ಣ ಕಿತ್ತು ನೆಲಕಚ್ಚಿದೆ. ವಿವಿಧೆಡೆ ವಿದ್ಯುತ್‌ ತಂತಿಗಳು ಹರಿದು ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಯಿತು. ಮಳೆ, ಗಾಳಿಯಿಂದ ಯಾವುದೇ ಜೀವಹಾನಿ ಅಥವಾ ದೊಡ್ಡ ಪ್ರಮಾಣದ ಆಸ್ತಿ ಪಾಸ್ತಿ ಹಾನಿಯಾಗಿಲ್ಲ ಎಂದು ತಾಲೂಕು ಆಡಳಿತ ತಿಳಿಸಿದೆ.
Vijaya Karnataka Web BEL-3KHANAPUR3


ಹುಕ್ಕೇರಿ ತಾಲೂಕಿನ ಯಮಕನಮರಡಿ, ಬೈಲಹೊಂಗಲ ತಾಲೂಕಿನ ಎಂ.ಕೆ.ಹುಬ್ಬಳ್ಳಿ ಸೇರಿದಂತೆ ಜಿಲ್ಲೆಯ ಕೆಲವು ಕಡೆ ಮಳೆ ಸುರಿದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ