ಆ್ಯಪ್ನಗರ

ವಾಹನ ಸವಾರರಿಗೆ ಜಲ್ಲಿ ಕಲ್ಲಿನ ಕಿರಿಕಿರಿ

ಬೈಲಹೊಂಗಲ : ಪಟ್ಟಣದಲ್ಲಿ ಅವೈಜ್ಞಾನಿಕವಾಗಿ ದುರಸ್ತಿ ಕಾರ್ಯ ಕೈಗೊಂಡಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ...

Vijaya Karnataka 15 Jul 2019, 5:00 am
ಬೈಲಹೊಂಗಲ: ಪಟ್ಟಣದಲ್ಲಿ ಅವೈಜ್ಞಾನಿಕವಾಗಿ ದುರಸ್ತಿ ಕಾರ್ಯ ಕೈಗೊಂಡಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ.
Vijaya Karnataka Web BEL-14HTP2


ಇಲ್ಲಿನ ಪ್ರಮುಖ ಬಜಾರ ರಸ್ತೆಯಲ್ಲಿ ಅಲ್ಲಲ್ಲಿ ತಗ್ಗು ದಿನ್ನೆಗಳಿದ್ದು ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬೇಸಿಗೆ ಕಾಲದಲ್ಲಿ ಧೂಳಿನ ಕಿರಿಕಿರಿ ಆಗುತ್ತಿತ್ತು. ಮಳೆಗಾಲದಲ್ಲಿ ತಗ್ಗು ದಿನ್ನೆಗಳು ನೀರಿನ ಹೊಂಡಗಳಾಗಿ ಮಾರ್ಪಟ್ಟು ಪಾದಚಾರಿ, ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿತ್ತು.

ಈ ಕುರಿತು ಪತ್ರಿಕಾ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ಕಾಟಾಚಾರಕ್ಕೆ ದುರಸ್ತಿ ಮಾಡಲಾಗಿತ್ತು. ದಿನನಿತ್ಯ ಮಳೆ ಸುರಿದಾಗ ರಸ್ತೆ ಸಂಪೂರ್ಣ ಕೆಸರುಮಯವಾಗಿತ್ತು. ಇದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಾಗ ಜಲ್ಲಿ ಕಲ್ಲಿನಿಂದ ರಸ್ತೆ ದುರಸ್ತಿ ಮಾಡಲಾಯಿತು. ಆದರೆ ಜಲ್ಲಿ ಕಲ್ಲಿನಿಂದ ವಾಹನಗಳ ಟೈರ್‌ಗಳು ಪಂಕ್ಚರ್‌ ಆಗುತ್ತಿವೆ. ಹೀಗಾಗಿ ನಾಗರಿಕರು ಮತ್ತೆ ಪುರಸಭೆ ವಿರುದ್ಧ ಹರಿಹಾಯುವಂತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ