ಬೆಳಗಾವಿ : ಗಾಂಜಾ ಮತ್ತಿನಲ್ಲಿ ಸಾರ್ವಜನಿಕರ ವಾಹನಗಳಿಗೆ ಬೆಂಕಿ ಹಚ್ಚುತ್ತಿದ್ದ ಇಬ್ಬರು ಆರೋಪಿಗಳನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನ್ಯೂ ಗಾಂಧಿ ನಗರದ ಅನಿಸ್ ಸಲೀಂಸಾಬ್ ಮಿರ್ಜಾಬಾಯಿ ಮತ್ತು ಉಜ್ವಲ ನಗರದ ಹತಾಷ್ ಅಬ್ದುಲ್ಸತ್ತಾರ ಹವಾಲ್ದಾರ್ ಬಂಧಿತ ಆರೋಪಿಗಳು.
ಕಾಮತ್ ಗಲ್ಲಿ, ಕಸಾಯಿ ಗಲ್ಲಿ, ಜಾಲಗಾರ ಗಲ್ಲಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಲಾಗಿದ್ದ ಬೈಕ್, ಕಾರು, ಆಟೋಗಳಿಗೆ ಬೆಂಕಿ ಹಚ್ಚುತ್ತಿದ್ದರು. ಅಲ್ಲದೆ, ಗಾಂಜಾ ಖರೀದಿಸುವ ಸಲುವಾಗಿ ದ್ವಿಚಕ್ರ ವಾಹನಗಳನ್ನೂ ಕಳ್ಳತನ ಮಾಡುತ್ತಿದ್ದರು. ಆರೋಪಿಗಳಿಂದ ಏಳು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.
ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಮಾರ್ಕೆಟ್ ಠಾಣೆ ಇನ್ಸ್ಪೆಕ್ಟರ್ ವಿಜಯ ಮುರಗುಂಡಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.
ನ್ಯೂ ಗಾಂಧಿ ನಗರದ ಅನಿಸ್ ಸಲೀಂಸಾಬ್ ಮಿರ್ಜಾಬಾಯಿ ಮತ್ತು ಉಜ್ವಲ ನಗರದ ಹತಾಷ್ ಅಬ್ದುಲ್ಸತ್ತಾರ ಹವಾಲ್ದಾರ್ ಬಂಧಿತ ಆರೋಪಿಗಳು.
ಕಾಮತ್ ಗಲ್ಲಿ, ಕಸಾಯಿ ಗಲ್ಲಿ, ಜಾಲಗಾರ ಗಲ್ಲಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಲಾಗಿದ್ದ ಬೈಕ್, ಕಾರು, ಆಟೋಗಳಿಗೆ ಬೆಂಕಿ ಹಚ್ಚುತ್ತಿದ್ದರು. ಅಲ್ಲದೆ, ಗಾಂಜಾ ಖರೀದಿಸುವ ಸಲುವಾಗಿ ದ್ವಿಚಕ್ರ ವಾಹನಗಳನ್ನೂ ಕಳ್ಳತನ ಮಾಡುತ್ತಿದ್ದರು. ಆರೋಪಿಗಳಿಂದ ಏಳು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.
ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಮಾರ್ಕೆಟ್ ಠಾಣೆ ಇನ್ಸ್ಪೆಕ್ಟರ್ ವಿಜಯ ಮುರಗುಂಡಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.