ಆ್ಯಪ್ನಗರ

ಪಿಕಪ್‌ ವಾಹನ ಪಲ್ಟಿಯಾಗಿ ಇಬ್ಬರು ಮಕ್ಕಳು ಸಾವು

ಅಥಣಿ: ಪಾದಚಾರಿಯನ್ನು ರಕ್ಷಿಸಲು ಹೋದ ಬೊಲೆರೊ ...

Vijaya Karnataka 21 Feb 2020, 5:00 am
ಅಥಣಿ: ಪಾದಚಾರಿಯನ್ನು ರಕ್ಷಿಸಲು ಹೋದ ಬೊಲೆರೊ ಪಿಕಪ್‌ ವಾಹನ ಪಲ್ಟಿಯಾಗಿ ಇಬ್ಬರು ಮಕ್ಕಳು ಸಾವಿಗೀಡಾಗಿ 6 ಜನ ಗಂಭೀರ ಗಾಯಗೊಂಡ ಘಟನೆ ಗುರುವಾರ ಸಂಜೆ ತಾಲೂಕಿನ ಮಸರಗುಪ್ಪಿ ಹೊರವಲಯದಲ್ಲಿನಡೆದಿದೆ.
Vijaya Karnataka Web 20-ATHANI-8_53
ಪಲ್ಟಿಯಾಗಿ ಬಿದ್ದಿರುವ ಬೊಲೆರೊ ವಾಹನ.


ಗ್ರಾಮದ ಸುಶಾಂತ ದರೂರ (11), ಪೃಥ್ವಿ ದರೂರ (7) ಮೃತರು. ಪಿಕಪ್‌ ವಾಹನ ಮರಸಗುಪ್ಪಿಯಿಂದ ಖಿಳೇಗಾಂವಿ ಕಡೆಗೆ ಮದುವೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ಪಾದಚಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.

ವಾಹನದಲ್ಲಿ35ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದು, ಗಂಭೀರ ಗಾಯಾಳುಗಳನ್ನು ಮಹಾರಾಷ್ಟ್ರದ ಮಿರಜ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಾಳುಗಳು ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆದಿದ್ದಾರೆ. ಅಥಣಿ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ