ಆ್ಯಪ್ನಗರ

ಕೊರೊನಾ ಲಕ್ಷಣದಿಂದ ಅಥಣಿಯ ಮಹಿಳೆ, ಗೋಕಾಕದ ವ್ಯಕ್ತಿ ಸಾವು ಆತಂಕ ಹೆಚ್ಚಿಸಿದ ಸಾವಿನ ಸರಣಿ

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರವೂ ಕೊರೊನಾ ಲಕ್ಷಣದಿಂದ ...

Vijaya Karnataka 7 Jul 2020, 5:00 am
ಬೆಳಗಾವಿ: ಜಿಲ್ಲೆಯಲ್ಲಿಸೋಮವಾರವೂ ಕೊರೊನಾ ಲಕ್ಷಣದಿಂದ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದು, ಹೊಸದಾಗಿ ಏಳಕ್ಕೂ ಹೆಚ್ಚು ಕೊರೊನಾ ಹೊಸ ಪ್ರಕರಣಗಳು ದೃಢಪಟ್ಟಿದೆ.
Vijaya Karnataka Web corona
ಸಾಂದರ್ಭಿಕ


ಅಥಣಿ ತಾಲೂಕಿನ 60 ವರ್ಷದ ಮಹಿಳೆ ಕೊರೊನಾ ಲಕ್ಷಣದಿಂದ ಜಿಲ್ಲಾಸ್ಪತ್ರೆಯಲ್ಲಿಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿಕೊರೊನಾ ಸೋಂಕಿನಿಂದ ಮೃತರಾದವರ ಸಂಖ್ಯೆ 7ಕ್ಕೆ ಏರಿದೆ. ಗೋಕಾಕದಲ್ಲಿಕೊರೊನಾ ಲಕ್ಷಣದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಆರೋಗ್ಯ ಇಲಾಖೆ ವರದಿ ಬಳಿಕ ಕೊರೊನಾ ಸೋಂಕಿನ ಬಗ್ಗೆ ಖಚಿತವಾಗಬೇಕಿದೆ.

ಆದರೆ, ಜಿಲ್ಲೆಯ ಕೊರೊನಾ ವರದಿ ಬರುವಷ್ಟರಲ್ಲೇ ಆರೋಗ್ಯ ಇಲಾಖೆ ಬುಲೆಟಿನ್‌ ಪ್ರಕಟವಾದ್ದರಿಂದ ಈ ಮಾಹಿತಿಗಳು ಬುಲೆಟಿನ್‌ ನಲ್ಲಿದಾಖಲಾಗಿಲ್ಲಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಖಚಿತವಾಗಿರುವ ಏಳು ಕೊರೊನಾ ಹೊಸ ಪ್ರಕರಣಗಳು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿವರದಿಯಾಗಿವೆ.

ಶೇ.50ರಷ್ಟು ಹಾಸಿಗೆಯನ್ನು ಕೊರೊನಾ ಚಿಕಿತ್ಸೆಗೆ ಬಳಸಲು ಸೂಚನೆ
ಬೆಳಗಾವಿ: ಕೊರೊನಾ ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿಖಾಸಗಿ ಆಸ್ಪತ್ರೆಗಳು ಸಹಕಾರ ನೀಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿಶೇ.50 ರಷ್ಟು ಹಾಸಿಗೆಯನ್ನು ಕೊರೊನಾ ರೋಗಿಗಳ ಚಿಕಿತ್ಸೆ ಮೀಸಲಿಡಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಸೋಮವಾರ ಕೊರೊನಾ ವೈರಸ್‌ ನಿಯಂತ್ರಣ ಕುರಿತು ನಡೆದ ಖಾಸಗಿ ಆಸ್ಪತ್ರೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಸಂದರ್ಭದಲ್ಲಿಹಾಸಿಗೆ ಕೊರತೆ ಆಗಬಾರದು. ಹಾಗಾಗಿ ಖಾಸಗಿ ಆಸ್ಪತ್ರೆಗಳು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಸಮಯದಲ್ಲಿಖಾಸಗಿ ಆಸ್ಪತ್ರೆಗಳಲ್ಲಿಚಿಕಿತ್ಸೆ ನೀಡಲಾಗುವುದು. ಆದರೆ, ಕೊರೊನಾ ಸೋಂಕಿತರನ್ನು ಆಸ್ಪತ್ರೆಗಳಲ್ಲಿದಾಖಲು ಮಾಡಿಕೊಳ್ಳುವುದರಿಂದ ಇತರೆ ರೋಗಿಗಳಿಗೆ ಸಮಸ್ಯೆಯಾಗುತ್ತದೆ. ಹೆಚ್ಚು ಸೋಂಕಿತರು ಇಲ್ಲದೇ ಇದ್ದರೆ ಸರಕಾರಿ ಆಸ್ಪತ್ರೆಯಲ್ಲೇ ದಾಖಲು ಮಾಡಿಕೊಂಡರೆ ಖಾಸಗಿ ಆಸ್ಪತ್ರೆಗಳ ವೈದ್ಯರು ಚಿಕಿತ್ಸೆಯಲ್ಲಿಭಾಗಿಯಾಗಲಿದ್ದಾರೆ'' ಎಂದರು.

ಜಿಲ್ಲಾವೈದ್ಯಾಧಿಕಾರಿ ಡಾ.ಎಸ್‌.ವಿ.ಮುನ್ಯಾಳ ಮಾತನಾಡಿ, ಜಿಲ್ಲೆಯ 9 ಆಸ್ಪತ್ರೆಗಳಲ್ಲಿ450 ಹಾಸಿಗೆಗಳಿವೆ. ಕೆಎಲ್‌ಇ, ಮಿಲಿಟರಿ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಮುಂದೆ ಬಂದಿವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ