ಆ್ಯಪ್ನಗರ

ವಿವಿಗಳು ಗ್ರಂಥಾಲಯ ವಿಜ್ಞಾನಕ್ಕೆ ಮಹತ್ವ ನೀಡಲಿ

ಬೆಳಗಾವಿ: ನಮ್ಮ ದೇಶದ ವಿಶ್ವವಿದ್ಯಾಲಯಗಳು ಗ್ರಂಥಾಲಯ ವಿಜ್ಞಾನ ಹಾಗೂ ದೈಹಿಕ ಶಿಕ್ಷ ಣ ವಿಭಾಗಗಳಿಗೆ ಹೆಚ್ಚಿನ ಮಹತ್ವ ನೀಡಬೇಕಿದೆ...

Vijaya Karnataka 9 Jun 2019, 5:00 am
ಬೆಳಗಾವಿ : ನಮ್ಮ ದೇಶದ ವಿಶ್ವವಿದ್ಯಾಲಯಗಳು ಗ್ರಂಥಾಲಯ ವಿಜ್ಞಾನ ಹಾಗೂ ದೈಹಿಕ ಶಿಕ್ಷ ಣ ವಿಭಾಗಗಳಿಗೆ ಹೆಚ್ಚಿನ ಮಹತ್ವ ನೀಡಬೇಕಿದೆ. ಜ್ಞಾನವನ್ನು ಪ್ರಸಾರ ಮಾಡುವ ಜವಾಬ್ದಾರಿ ಗ್ರಂಥಾಲಯಗಳ ಮೇಲಿದೆ ಎಂದು ಅನಂತಪುರದ ಜವಾಹರಲಾಲ್‌ ನೆಹರು ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಡಾ. ಎಸ್‌. ಶ್ರೀನಿವಾಸ ಕುಮಾರ ಹೇಳಿದರು.
Vijaya Karnataka Web BEL-8 LBS 10


ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಶನಿವಾರ ಬೆಳಗಾವಿಯ ಎಲ್‌ಐಎಸ್‌ ಅಕಾಡೆಮಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 'ಗ್ರಂಥಾಲಯಗಳಲ್ಲಿ ಅನ್ವೇಷಣೆಯ ಅವಕಾಶಗಳು' ವಿಷಯದ ಮೇಲಿನ ಮೂರು ದಿನಗಳ ರಾಷ್ಟ್ರ ಮಟ್ಟದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಉತ್ತಮ ಗುಣಮಟ್ಟದ ಶಿಕ್ಷ ಣ ಹಾಗೂ ಪ್ರಾಧ್ಯಾಪಕರ ಮೇಲೆ ದೇಶದ ಅಭಿವೃದ್ಧಿ ಅವಲಂಬಿತವಾಗಿದೆ ಎಂದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ. ಸತೀಶ ಅಣ್ಣಿಗೇರಿ ಮಾತನಾಡಿ, ಡಿಜಿಟಲ್‌ ಯುಗದಲ್ಲಿ ಗ್ರಂಥಪಾಲಕರು ಹೆಚ್ಚಿನ ಸವಾಲುಗಳನ್ನು ಎದುರಿಸಬೇಕಾಗಿದೆ ಎಂದರು. ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯದ ವತಿಯಿಂದ ಡಾ. ಎಸ್‌.ಶ್ರೀನಿವಾಸ ಕುಮಾರ ಅವರನ್ನು ಸನ್ಮಾನಿಸಲಾಯಿತು. ಎಲ್‌ಐಎಸ್‌ ಅಕಾಡೆಮಿ ಅಧ್ಯಕ್ಷ ಡಾ. ಪಿ.ವಿ.ಕೊಣ್ಣೂರ, ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಮಧುಸೂದನ, ಡಾ. ಶ್ಯಾಮ ಪೂಜಾರ, ಡಾ. ಕೆ.ಆರ್‌.ಮುಲ್ಲಾ ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ