ಬೆಳಗಾವಿ : ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಯಳ್ಳೂರು ರಾಜಹಂಸಗಡ ಕೋಟೆಯಲ್ಲಿ ಪ್ರತಿಷ್ಠಾಪಿಸಿರುವ ಬೃಹತ್ ಶಿವಾಜಿ ಮಹಾರಾಜರ ಮೂರ್ತಿ ವಿಚಾರ ಈಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಮೂರ್ತಿ ಸ್ಥಳಕ್ಕೆ ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಿಷ್ಟಾಚಾರ ಪಾಲಿಸುವುದಾದರೆ ರಾಜಹಂಸಗಡದಲ್ಲಿ ನಾಳೆಯೇ ಶಿವಾಜಿ ಮಹಾರಾಜರ ಮೂರ್ತಿ ಉದ್ಘಾಟನೆ ಮಾಡಲಿ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ಬಹಿರಂಗ ಸವಾಲು ಹಾಕಿದರು. ಪತ್ರಿಕೆಯಲ್ಲಿ ಬಂದ ನಂತರ ನಮಗೆ ಕಾರ್ಯಕ್ರಮದ ಕುರಿತು ಗೊತ್ತಾಗಿದೆ. 2010ರಿಂದ ಕೋಟೆ ಅಭಿವೃದ್ಧಿಯಾಗುತ್ತಿದೆ. ಅಭಿವೃದ್ಧಿಗೆ ನಮ್ಮ ಅಭ್ಯಂತರ ಇಲ್ಲ. ಆದರೆ ಇದನ್ನು ಪಕ್ಷದ ಕಾರ್ಯಕ್ರಮ ಮಾಡುವುದಕ್ಕೆ ನಮ್ಮ ವಿರೋಧವಿದೆ. ಇದು ಸರ್ಕಾರಿ ಕಾರ್ಯಕ್ರಮ ಆಗಬೇಕು. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮತ್ತು ಜಿಲ್ಲಾಧಿಕಾರಿ ಜತೆಗೆ ಚರ್ಚಿಸುತ್ತೇನೆ ಎಂದರು.
ಬಹಿರಂಗ ಚರ್ಚೆಗೆ ಬರುವಂತೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ಬಾಗಿಲು ಕಾಯುವ ಅವನ ಜತೆ ಚರ್ಚೆ ಮಾಡಲ್ಲ. ಬೇಕಾದರೆ ಡಿ.ಕೆ ಶಿವಕುಮಾರ್ ಜತೆ ನಾನು ಬಹಿರಂಗ ಚರ್ಚೆಗೆ ಸಿದ್ಧ, ಚನ್ನರಾಜ ಹಟ್ಟಿಹೊಳಿ ಅವರ ಬಗ್ಗೆ ಮಾತಾಡುವಷ್ಟು ಸಣ್ಣವನು ನಾನಲ್ಲ ಎಂದು ವ್ಯಂಗ್ಯವಾಡಿದರು.
ಮಾಜಿ ಶಾಸಕ ಸಂಜಯ್ ಪಾಟೀಲ್ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರನ್ನು ದೇವರಂತೆ ನಾವು ಪೂಜಿಸುತ್ತೇವೆ. ಇದಕ್ಕೆ ತಡೆಯೊಡ್ಡುವುದು ನಮ್ಮ ಉದ್ದೇಶ ಇಲ್ಲ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರನ್ನು ಕರೆಸುತ್ತಿದ್ದಾರೆ. ಪ್ರೋಟೋಕಾಲ್ ಪ್ರಕಾರ ಕಾರ್ಯಕ್ರಮ ಮಾಡುತ್ತಿಲ್ಲ. ಈ ಹಿಂದೆ ನಾನು ಶಾಸಕನಾಗಿದ್ದಾಗ ಅಂದಿನ ಸಚಿವ ಜನಾರ್ದನ ರೆಡ್ಡಿ ಅವರನ್ನು ಕರೆದುಕೊಂಡು ಬಂದಿದ್ದೆ. ಆಗ ಅವರು 4 ಕೋಟಿ ರೂ. ಬಿಡುಗಡೆ ಮಾಡಿದ್ದರು. ಇಲ್ಲಿ ನಡೆದುಕೊಂಡು ಬರಲು ಆಗುತ್ತಿರಲಿಲ್ಲ. ಈಗ ವಾಹನಗಳು ಬರುವಂತೆ ಆಗಿದೆ. ಇಲ್ಲಿ ಒಂದು ನೀರಿನ ಘಟಕ ನಿರ್ಮಿಸಿದ್ದೇವೆ. ಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿ ಪಡಿಸಿದ್ದೇನೆ. ಇದು ನನ್ನ ಕನಸು ಎನ್ನುತ್ತಿರುವ ಶಾಸಕಿಗೆ 2013 ರಿಂದ 2018ರಲ್ಲಿ ಅವರದ್ದೇ ಸರ್ಕಾರ ಇದ್ದಾಗ ಕನಸು ಇರಲಿಲ್ಲವೇ. ಈಗ ಎಲ್ಲಿಂದ ಇವರಿಗೆ ಕನಸು ಬಂತು? ಎಂದು ಪ್ರಶ್ನಿಸಿದರು.
ಈ ಹಿಂದೆ ಪ್ರವಾಸೋದ್ಯಮ ಸಚಿವರಾಗಿದ್ದ ಸಿ.ಟಿ.ರವಿ ಅವರ ಬಳಿ ನಾನು ಪ್ರಸ್ತಾವನೆ ಸಲ್ಲಿಸಿದ್ದೆ. ಸಿ.ಟಿ.ರವಿ ಅವರು ಮೂರೂವರೆ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಕಾಂಗ್ರೆಸ್ ಸರ್ಕಾರ ಏನು ಅನುದಾನ ಕೊಟ್ಟಿಲ್ಲ ಎಂದರು. ಬಡಾಲ ಅಂಕಲಗಿಯ ಕೌರಿಗುಡ್ಡದಲ್ಲಿ ಒಂದು ಕೋಟಿ ಅನುದಾನದಲ್ಲಿ ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣನ ಮೂರ್ತಿಗಳ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿದ್ದೆ. ನಾವು ಎಲ್ಲ ಧರ್ಮ, ಜಾತಿಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ. ನಾನು ಚನ್ನಮ್ಮ ಎಂದು ಹೇಳಿಕೊಳ್ಳುವ ಅವರಂತೆ ನಾನು ಶಿವಾಜಿ ಮಹಾರಾಜರಿಗೆ ನನ್ನನ್ನು ಹೋಲಿಕೆ ಮಾಡಿಕೊಳ್ಳಲ್ಲ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ್ ಕುಟುಕಿದರು.
ಒಂದೇ ಒಂದು ರೂಪಾಯಿ ಅನುದಾನ ಬಿಡುಗಡೆ ಆಗಿದ್ದರೆ ಅದು ಬಿಜೆಪಿ ಸರ್ಕಾರದಲ್ಲಿಯೇ ಹೊರತು, ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ರೀತಿ ಹಣ ಬಿಡುಗಡೆ ಮಾಡಿಲ್ಲ. ಅವರ ಸರ್ಕಾರ ಇದ್ದಾಗ ಅನುದಾನ ಬಿಡುಗಡೆ ಮಾಡಿಸಿಲ್ಲ. ಅವರಂತೆ ನಾನು ಸಗಣಿ ತಿನ್ನುವುದಿಲ್ಲ, ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ನಾನು ವಿರೋಧ ಪಡಿಸಿಲ್ಲ. ಮೋಸದ ಎರಡನೇ ಹೆಸರು ಲಕ್ಷ್ಮೀ ಹೆಬ್ಬಾಳ್ಕರ್, ಗ್ರಾಮೀಣ ಕ್ಷೇತ್ರದಲ್ಲಿ ಗಡದೇವರಮಠಗೆ ಟಿಕೆಟ್ ತಪ್ಪಿಸಿ, ಗಡದೇವರಮಠ ಮತ್ತು ರಮೇಶ್ ಜಾರಕಿಹೊಳಿ ಅವರಿಗೂ ಲಕ್ಷ್ಮೀ ಹೆಬ್ಬಾಳ್ಕರ ಮೋಸ ಮಾಡಿದ್ದಾರೆ ಎಂದು ಸಂಜಯ್ ಪಾಟೀಲ್ ಆರೋಪಿಸಿದರು.
ಬಹಿರಂಗ ಚರ್ಚೆಗೆ ಬರುವಂತೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ಬಾಗಿಲು ಕಾಯುವ ಅವನ ಜತೆ ಚರ್ಚೆ ಮಾಡಲ್ಲ. ಬೇಕಾದರೆ ಡಿ.ಕೆ ಶಿವಕುಮಾರ್ ಜತೆ ನಾನು ಬಹಿರಂಗ ಚರ್ಚೆಗೆ ಸಿದ್ಧ, ಚನ್ನರಾಜ ಹಟ್ಟಿಹೊಳಿ ಅವರ ಬಗ್ಗೆ ಮಾತಾಡುವಷ್ಟು ಸಣ್ಣವನು ನಾನಲ್ಲ ಎಂದು ವ್ಯಂಗ್ಯವಾಡಿದರು.
ಮಾಜಿ ಶಾಸಕ ಸಂಜಯ್ ಪಾಟೀಲ್ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರನ್ನು ದೇವರಂತೆ ನಾವು ಪೂಜಿಸುತ್ತೇವೆ. ಇದಕ್ಕೆ ತಡೆಯೊಡ್ಡುವುದು ನಮ್ಮ ಉದ್ದೇಶ ಇಲ್ಲ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರನ್ನು ಕರೆಸುತ್ತಿದ್ದಾರೆ. ಪ್ರೋಟೋಕಾಲ್ ಪ್ರಕಾರ ಕಾರ್ಯಕ್ರಮ ಮಾಡುತ್ತಿಲ್ಲ. ಈ ಹಿಂದೆ ನಾನು ಶಾಸಕನಾಗಿದ್ದಾಗ ಅಂದಿನ ಸಚಿವ ಜನಾರ್ದನ ರೆಡ್ಡಿ ಅವರನ್ನು ಕರೆದುಕೊಂಡು ಬಂದಿದ್ದೆ. ಆಗ ಅವರು 4 ಕೋಟಿ ರೂ. ಬಿಡುಗಡೆ ಮಾಡಿದ್ದರು. ಇಲ್ಲಿ ನಡೆದುಕೊಂಡು ಬರಲು ಆಗುತ್ತಿರಲಿಲ್ಲ. ಈಗ ವಾಹನಗಳು ಬರುವಂತೆ ಆಗಿದೆ. ಇಲ್ಲಿ ಒಂದು ನೀರಿನ ಘಟಕ ನಿರ್ಮಿಸಿದ್ದೇವೆ. ಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿ ಪಡಿಸಿದ್ದೇನೆ. ಇದು ನನ್ನ ಕನಸು ಎನ್ನುತ್ತಿರುವ ಶಾಸಕಿಗೆ 2013 ರಿಂದ 2018ರಲ್ಲಿ ಅವರದ್ದೇ ಸರ್ಕಾರ ಇದ್ದಾಗ ಕನಸು ಇರಲಿಲ್ಲವೇ. ಈಗ ಎಲ್ಲಿಂದ ಇವರಿಗೆ ಕನಸು ಬಂತು? ಎಂದು ಪ್ರಶ್ನಿಸಿದರು.
ಈ ಹಿಂದೆ ಪ್ರವಾಸೋದ್ಯಮ ಸಚಿವರಾಗಿದ್ದ ಸಿ.ಟಿ.ರವಿ ಅವರ ಬಳಿ ನಾನು ಪ್ರಸ್ತಾವನೆ ಸಲ್ಲಿಸಿದ್ದೆ. ಸಿ.ಟಿ.ರವಿ ಅವರು ಮೂರೂವರೆ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಕಾಂಗ್ರೆಸ್ ಸರ್ಕಾರ ಏನು ಅನುದಾನ ಕೊಟ್ಟಿಲ್ಲ ಎಂದರು. ಬಡಾಲ ಅಂಕಲಗಿಯ ಕೌರಿಗುಡ್ಡದಲ್ಲಿ ಒಂದು ಕೋಟಿ ಅನುದಾನದಲ್ಲಿ ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣನ ಮೂರ್ತಿಗಳ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿದ್ದೆ. ನಾವು ಎಲ್ಲ ಧರ್ಮ, ಜಾತಿಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ. ನಾನು ಚನ್ನಮ್ಮ ಎಂದು ಹೇಳಿಕೊಳ್ಳುವ ಅವರಂತೆ ನಾನು ಶಿವಾಜಿ ಮಹಾರಾಜರಿಗೆ ನನ್ನನ್ನು ಹೋಲಿಕೆ ಮಾಡಿಕೊಳ್ಳಲ್ಲ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ್ ಕುಟುಕಿದರು.
ಒಂದೇ ಒಂದು ರೂಪಾಯಿ ಅನುದಾನ ಬಿಡುಗಡೆ ಆಗಿದ್ದರೆ ಅದು ಬಿಜೆಪಿ ಸರ್ಕಾರದಲ್ಲಿಯೇ ಹೊರತು, ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ರೀತಿ ಹಣ ಬಿಡುಗಡೆ ಮಾಡಿಲ್ಲ. ಅವರ ಸರ್ಕಾರ ಇದ್ದಾಗ ಅನುದಾನ ಬಿಡುಗಡೆ ಮಾಡಿಸಿಲ್ಲ. ಅವರಂತೆ ನಾನು ಸಗಣಿ ತಿನ್ನುವುದಿಲ್ಲ, ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ನಾನು ವಿರೋಧ ಪಡಿಸಿಲ್ಲ. ಮೋಸದ ಎರಡನೇ ಹೆಸರು ಲಕ್ಷ್ಮೀ ಹೆಬ್ಬಾಳ್ಕರ್, ಗ್ರಾಮೀಣ ಕ್ಷೇತ್ರದಲ್ಲಿ ಗಡದೇವರಮಠಗೆ ಟಿಕೆಟ್ ತಪ್ಪಿಸಿ, ಗಡದೇವರಮಠ ಮತ್ತು ರಮೇಶ್ ಜಾರಕಿಹೊಳಿ ಅವರಿಗೂ ಲಕ್ಷ್ಮೀ ಹೆಬ್ಬಾಳ್ಕರ ಮೋಸ ಮಾಡಿದ್ದಾರೆ ಎಂದು ಸಂಜಯ್ ಪಾಟೀಲ್ ಆರೋಪಿಸಿದರು.