ಆ್ಯಪ್ನಗರ

ಗೋಮಾಳ ಜಮೀನಿನಲ್ಲಿ ವಸತಿ ಶಾಲೆ ನಿರ್ಮಾಣ ಬೇಡ

ಗೋಕಾಕ: ತಾಲೂಕಿನ ತಪಸಿ ಗ್ರಾಮದ ಗೋಮಾಳ ...

Vijaya Karnataka 8 Jul 2020, 5:00 am
ಬೆಳಗಾವಿ: ಗೋಕಾಕ ತಾಲೂಕಿನ ತಪಸಿ ಗ್ರಾಮದ ಗೋಮಾಳ ಜಮೀನಿನಲ್ಲಿಬಡವರು ನಿರ್ಮಾಣ ಮಾಡಿಕೊಂಡ ಮನೆಗಳ ಜಾಗದಲ್ಲಿಅಟಲ್‌ ಬಿಹಾರಿ ವಾಜಪೇಯಿ ವಸತಿ ಶಾಲೆ ನಿರ್ಮಾಣ ಮಾಡಬಾರದು ಎಂದು ಕಾಂಗ್ರೆಸ್‌ ಮುಖಂಡ ಅರವಿಂದ ದಳವಾಯಿ ಒತ್ತಾಯಿಸಿದರು.
Vijaya Karnataka Web school
ಸಾಂದರ್ಭಿಕ


ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಗೋಕಾಕ ತಾಲೂಕಿನ ತಪಸಿ ಗ್ರಾಮದಲ್ಲಿ40 ಎಕರೆ ಗೋಮಾಳ ಜಮೀನು ಇದೆ. ಈ ಜಮೀನಿನಲ್ಲಿಕಳೆದ 70 ವರ್ಷಗಳಿಂದ ಬಡವರ್ಗದ ವಸತಿ ಹೀನರು ಮನೆಗಳನ್ನು ನಿರ್ಮಾಣ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈ ಪ್ರದೇಶದಲ್ಲಿಕಳೆದ ವಿಧಾನಸಭೆ ಚುನಾವಣೆಯಲ್ಲಿಕಾಂಗ್ರೆಸ್‌ಗೆ ಹೆಚ್ಚು ಮತಗಳು ಬಂದಿವೆ. ಹಾಗಾಗಿ ರಾಜಕೀಯ ದುರುದ್ದೇಶದಿಂದ ಮನೆಗಳು ಇರುವ ಸ್ಥಳದಲ್ಲಿವಸತಿ ಶಾಲೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ವಸತಿ ಯೋಜನೆಗಳಲ್ಲಿಹಲವು ಜನರು ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ. ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಕ್ಕೆ ಅರ್ಜಿ ಕೂಡ ಸಲ್ಲಿಸಿದ್ದಾರೆ. ಆದರೆ, ಮನೆಗಳನ್ನು ನೆಲಸಮಗೊಳಿಸಿ ವಸತಿ ಶಾಲೆ ನಿರ್ಮಿಸುವುದು ಸರಿಯಲ್ಲ. ಇದರಿಂದಾಗಿ ಬಡ ಕುಟುಂಬಗಳು ಬೀದಿಗೆ ಬೀಳುತ್ತವೆ. ಆದ್ದರಿಂದ ವಸತಿ ಶಾಲೆಯನ್ನು ಬೇರೆಡೆ ನಿರ್ಮಾಣ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ