ಆ್ಯಪ್ನಗರ

ಶೀಘ್ರ ವೇತನ ನೀಡಲು ಆಗ್ರಹ

ಎಂಕೆಹುಬ್ಬಳ್ಳಿ: ತಮಗೆ 23 ತಿಂಗಳುಗಳಿಂದ ವೇತನ ನೀಡಿಲ್ಲ...

Vijaya Karnataka 20 Dec 2018, 5:00 am
ಎಂ.ಕೆ.ಹುಬ್ಬಳ್ಳಿ : ತಮಗೆ 23 ತಿಂಗಳುಗಳಿಂದ ವೇತನ ನೀಡಿಲ್ಲ. ಶೀಘ್ರವೇ ವೇತನ ನೀಡಲು ಕ್ರಮ ಕೈಗೊಂಡು ಸೇವೆಯನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಪಪಂ ಪೌರ ಕಾರ್ಮಿಕರು ಪಪಂ ಸಮುದಾಯ ಸಂಘಟನಾಧಿಕಾರಿ ಎ.ಎಸ್‌. ಶೆಟ್ಟರ ಅವರಿಗೆ ಮನವಿ ಸಲ್ಲಿಸಿದರು.
Vijaya Karnataka Web BEL-19MKH2


''ವೇತನ ಇಲ್ಲದೇ ಜೀವನ ಸಾಗಿಸುವುದು ಕಷ್ಟವಾಗಿದೆ. ಈ ಹಿಂದೆ ಬೆಳಗಾವಿ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಜನಸ್ಪಂದನ ಕಾರ್ಯಕ್ರಮದಲ್ಲಿ ಇದನ್ನು ಗಮನಕ್ಕೆ ತಂದಿದ್ದೆವು. ಐದು ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿ ಹೋದವರು ಇದುವರೆಗೂ ಸಮಸ್ಯೆಗೆ ಸ್ಪಂದಿಸಿಲ್ಲ. ವೇತನ ನೀಡಿ ಸೇವೆಯನ್ನು ಕಾಯಂಗೊಳಿಸುವವರೆಗೆ ಪ್ರತಿಭಟನೆ ಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ,'' ಎಂದು ಪ್ರತಿಭಟನಾಕಾರರು ಹೇಳಿದರು. ಪೌರ ಕಾರ್ಮಿಕರಾದ ಮಲ್ಲಿಕಾರ್ಜುನ ತಿಗಡಿ, ರಾಜು ಮಾದರ, ದೇಮಪ್ಪ ಜೋತಗನ್ನವರ, ಸಂಜೀವ ಕೋಲಕಾರ, ಶೆಟ್ಟೆಪ್ಪ ಕೋಲಕಾರ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ