ಆ್ಯಪ್ನಗರ

ರೇಣುಕಾಚಾರ್ಯ ಸೊಸೈಟಿ ಆಡಳಿತ ಮಂಡಳಿ ವಿರುದ್ಧ ಕ್ರಮಕ್ಕೆ ಒತ್ತಾಯ

ಬೆಳಗಾವಿ: ಹಕರ ಹಣ ದುರ್ಬಳಕೆ ಮಾಡಿದ ಗೋಕಾಕ ತಾಲೂಕಿನ ಜಗದ್ಗುರು ರೇಣುಕಾಚಾರ್ಯ ಮಹಿಳಾ ಸಹಕಾರಿ ಪತ್ತಿನ ಸಂಘದ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ...

Vijaya Karnataka 29 Jan 2019, 5:00 am
ಬೆಳಗಾವಿ : ಗ್ರಾಹಕರ ಹಣ ದುರ್ಬಳಕೆ ಮಾಡಿದ ಗೋಕಾಕ ತಾಲೂಕಿನ ಜಗದ್ಗುರು ರೇಣುಕಾಚಾರ್ಯ ಮಹಿಳಾ ಸಹಕಾರಿ ಪತ್ತಿನ ಸಂಘದ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜೈ ಭಾರತಿ ಯುವ ಸೇನೆ ಉತ್ತರ ಕರ್ನಾಟಕ ಅಧ್ಯಕ್ಷ ಶಿವಾನಂದ ಹಿರೇಮಠ ಹೇಳಿದರು.
Vijaya Karnataka Web BLG-2801-2-52-28SANJAY1


ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಮಾತನಾಡಿದ ಅವರು, ಜಗದ್ಗುರು ರೇಣುಕಾಚಾರ್ಯ ಮಹಿಳಾ ಸಹಕಾರಿ ಪತ್ತಿನ ಸಂಘ ಯಾವುದೇ ನಷ್ಟ ಅನುಭವಿಸಿಲ್ಲ. 2016-17ನೇ ಸಾಲಿನಲ್ಲಿ ಅಡಿಟ್‌ ಮಾಡದೇ ನಕಲಿ ಅಢಾವೆ ಪತ್ರಿಕೆಯನ್ನು ಸೃಷ್ಟಿಸಲು ಸಹಕರಿಸಿದ ಲೆಕ್ಕ ಪರಿಶೋಧಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬ್ಯಾಂಕ್‌ನಲ್ಲಿ ಸುಮಾರು 5 ಕೋಟಿ ರೂಪಾಯಿ ಹಣ ದುರ್ಬಳಕೆಯಾಗಿದೆ. ಈ ಹಣವನ್ನು ಆಡಳಿತ ಮಂಡಳಿಯವರು ದುರ್ಬಳಕೆ ಮಾಡಿದ್ದು ಬೆಳಕಿಗೆ ಬಂದಿದೆ. ಇದರಿಂದ ಗ್ರಾಹಕರು ಆತಂಕಕ್ಕೊಳಗಾಗಿದ್ದು, ಅವರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು. ಶ್ರೀಪತಿ ಟಿಪುಕಡೆ, ಶಂಕರ ಕೋದನಪುರ, ಹಣಮಂತ ತಹಸೀಲ್ದಾರ, ಬಸವರಾಜ ಮಾನೆಪ್ಪಗೊಳ, ಬಸವರಾಜ ಆದರಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ