ಆ್ಯಪ್ನಗರ

ರಮೇಶ್‌ಗೆ ಪುನಃ ಸಚಿವ ಸ್ಥಾನ ನೀಡಿ; ವಾಲ್ಮೀಕಿ ಸಮಾಜ ಸಂಘಟನೆಯಿಂದ ಪ್ರತಿಭಟನೆ, ಮನವಿ

ರಾಜಕೀಯವಾಗಿ ರಮೇಶ ಜಾರಕಿಹೊಳಿ ಅವರ ತೇಜೋವಧೆ ಮಾಡಲು ಷಡ್ಯಂತ್ರ ರಚಿಸಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ. ಇದೆಲ್ಲದರ ನಡುವೆ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಿದಾಗ ಮುಖ್ಯಮಂತ್ರಿ ಅಂಗೀಕಾರ ಮಾಡಬಾರದಿತ್ತು. ಆದರೆ, ಇನ್ನೂ ಕಾಲ ಮಿಂಚಿಲ್ಲತಪ್ಪು ಮಾಡದ ರಮೇಶ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka Web 10 Mar 2021, 2:26 pm
ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಪುನಃ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ಜಿಲ್ಲಾ ವಾಲ್ಮೀಕಿ ಸಮಾಜ ಸಂಘಟನೆಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web Ramesh Jarkiholi


ನಕಲಿ ರಾಸಲೀಲೆ ಸಿಡಿ ಬಿಡುಗಡೆ ಮಾಡುವ ಮೂಲಕ ರಮೇಶ ಜಾರಕಿಹೊಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ ಮಾಡಲಾಗಿದೆ. ರಾಜಕೀಯವಾಗಿ ರಮೇಶ ಜಾರಕಿಹೊಳಿ ಅವರ ತೇಜೋವಧೆ ಮಾಡಲು ಷಡ್ಯಂತ್ರ ರಚಿಸಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ. ಇದೆಲ್ಲದರ ನಡುವೆ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಿದಾಗ ಮುಖ್ಯಮಂತ್ರಿ ಅಂಗೀಕಾರ ಮಾಡಬಾರದಿತ್ತು. ಆದರೆ, ಇನ್ನೂ ಕಾಲ ಮಿಂಚಿಲ್ಲತಪ್ಪು ಮಾಡದ ರಮೇಶ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.
‘ಸಿದ್ದರಾಮಯ್ಯಗೆ ನಮ್ಮ ಸಮಾಜದ ಮೇಲೆ ಪ್ರೀತಿ ಐತಿ, ಆದರೆ ಸಿಎಂಗೆ ಕಾಳಜಿ ಇಲ್ಲ’; ಯತ್ನಾಳ್‌-ರೇಣುಕಾಚಾರ್ಯ ಜಟಾಪಟಿ
ಸಂಘಟನೆ ಅಧ್ಯಕ್ಷ ರಾಜಶೇಖರ ತಳವಾರ, ಅಜಿತ ನಾಯಕ, ಅಶೋಕ ನಾಯಕ, ಚಂದ್ರಶೇಖರ ಬಾಗಡೆ, ನಿತಿನ್‌ ಗಸ್ತಿ, ಪಾಂಡುರಂಗ ನಾಯಕ, ಸಂಜಯ್‌ ನಾಯಕ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ