ಆ್ಯಪ್ನಗರ

ಶೀಘ್ರ ಬೆಳಗಾವಿ-ಬೆಂಗಳೂರು ಎಕ್ಸ್‌ಪ್ರೆಸ್‌

ಗಡಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು- ಬೆಳಗಾವಿ ...

Vijaya Karnataka 24 Jun 2019, 10:15 pm
ಬೆಳಗಾವಿ : ಗಡಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು- ಬೆಳಗಾವಿ ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಆದೇಶಿಸಿದ್ದು, ಮುಂದಿನವಾರದಿಂದ ಸಂಚಾರ ಆರಂಭಿಸಲಿದೆ. ನಗರದ ರೈಲು ನಿಲ್ದಾಣದಿಂದ ಭಾನುವಾರ ಹುಬ್ಬಳ್ಳಿಗೆ ವಿಶೇಷ ರೈಲಿನಲ್ಲಿ ತೆರಳಿದ ಸಚಿವ ಅಂಗಡಿ, ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಆದೇಶ ನೀಡಿದ್ದಾರೆ. ಬೆಳಗಾವಿ ನಗರದ ರೈಲು ನಿಲ್ದಾಣದ 1ನೇ ಪ್ಲಾಟ್‌ ಫಾರ್ಮ್‌ನಲ್ಲಿ ಬೆಳಗಾವಿಯ ಇತಿಹಾಸ ಸಾರುವ ಮ್ಯೂಸಿಯಂ ನಿರ್ಮಾಣ, ನಗರದ ಕಪಿಲೇಶ್ವರ ಮೇಲ್ಸೇತುವೆ ಹತ್ತಿರ ಪಾದಚಾರಿಗಳ ಉಪಯೋಗಕ್ಕೆ ಪಾದಚಾರಿ ಮಾರ್ಗ ಅಥವಾ ಲಿಫ್ಟ್‌ ನಿರ್ಮಾಣ, ಬೆಳಗಾವಿ ನಿಲ್ದಾಣದ ದಕ್ಷಿಣ ಭಾಗದಲ್ಲಿ ಪ್ರವೇಶ ಕಾಮಗಾರಿ ಆರಂಭಿಸುವುದು, ನಿಲ್ದಾಣದಲ್ಲಿನ ಗೂಡ್ಸ್‌ಶೆಡ್‌ಅನ್ನು ಸಾಂಬ್ರಾಕ್ಕೆ ಸ್ಥಳಾಂತರಿಸುವ ಕುರಿತು ಪರಿಶೀಲಿಸಿ ಕ್ರಮಕೈಗೊಳ್ಳಬೇಕು. ಲೋಂಡಾ-ಮೀರಜ್‌ ರೈಲು ಮಾರ್ಗ ಡಬ್ಲಿಂಗ್‌ ಮತ್ತು ಎಲೆಕ್ಟ್ರಿಫಿಕೇಶನ್‌ ಕೆಲಸ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದೂ ಇದೇ ವೇಳೆ ಸಚಿವರು ಅಧಿಕಾರಿಗಳಿಗೆ ಸಚಿವರು ತಿಳಿಸಿದ್ದಾರೆ.
Vijaya Karnataka Web very soon belagavi bengaluru express
ಶೀಘ್ರ ಬೆಳಗಾವಿ-ಬೆಂಗಳೂರು ಎಕ್ಸ್‌ಪ್ರೆಸ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ