ಆ್ಯಪ್ನಗರ

ಕಾಂಗ್ರೆಸ್‌ ಕಾರ್ಯಕರ್ತರಿಂದ ವಿಜಯೋತ್ಸವ

ಬೆಳಗಾವಿ : ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಭಾರೀ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮಂಗಳವಾರ ನಗರದ ಕ್ಲಬ್‌ ರಸ್ತೆಯ ಜಿಲ್ಲಾ ಗ್ರಾಮೀಣ ...

Vijaya Karnataka 12 Dec 2018, 5:00 am
ಬೆಳಗಾವಿ : ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಭಾರೀ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮಂಗಳವಾರ ನಗರದ ಕ್ಲಬ್‌ ರಸ್ತೆಯ ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಕಚೇರಿ ಮುಂದೆ ವಿಜಯೋತ್ಸವ ಆಚರಿಸಿದರು.
Vijaya Karnataka Web BEL-11 LBS 10


ಈ ವೇಳೆ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ವೀರಣ್ಣ ಮತ್ತಿಕಟ್ಟಿ, ಜಾತಿ ಮತ್ತು ಧರ್ಮದ ಮಧ್ಯೆ ಹುಳಿಹಿಂಡಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿರುವ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರಿಗೆ ಪಂಚರಾಜ್ಯಗಳ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಜಾತಿ ಹಾಗೂ ಹಿಂದೂ- ಮುಸ್ಲಿಂ ಧರ್ಮಗಳ ಮಧ್ಯೆ ಜನರಲ್ಲಿ ದ್ವೇಷದ ಭಾವನೆ ಮೂಡಿಸುತ್ತಿರುವ ಬಿಜೆಪಿಯನ್ನು ಕಿತ್ತೊಗೆದು ಸರ್ವಧರ್ಮಿಯರ ಭಾವೈಕ್ಯತೆಗೆ ಮತದಾರರು ಮಣೆ ಹಾಕಿದ್ದಾರೆ. ಅಲ್ಲದೇ ಈ ಐದು ರಾಜ್ಯಗಳಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿ ಕಡಿಮೆ ಶಾಸಕರನ್ನು ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಅರ್ಪಿಸಿದರು.

ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ, ರಾಹುಲ್‌ ಗಾಂಧಿ ನಾಯಕತ್ವ ಮೆಚ್ಚಿದ ಜನರು ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅವಕಾಶ ನೀಡಿದ್ದಾರೆ. ಈ ಫಲಿತಾಂಶದಿಂದ ಯುವ ನಾಯಕನಿಗೆ ದೇಶದ ಜನರು ಬೆಂಬಲಿಸುತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳಲ್ಲಿ ಗೆಲವು ಸಾಧಿಸುವ ಮೂಲಕ ರಾಹುಲ್‌ ಗಾಂಧಿ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಂಸದ ಐ.ಜಿ. ಸನದಿ, ರಾಜಾಸಲೀಂ, ಶೇಖರ ಈಟಿ, ಸಂತೋಷ ಹಂಜಿ, ಮಹಾಂತೇಶ ಮತ್ತಿಕಪ್ಪ, ಮಹಾಂತೇಶ ಉಪ್ಪಿನ, ವಿಜಯ ಹುಣಶ್ಯಾಳ, ಶಂಕರಗೌಡ ಪಾಟೀಲ ಮೊದಲಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ