ಬಸಳಗುಂದಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ
ಗೋಕಾಕ : ತಾಲೂಕಿನ ಬಸಳಿಗುಂದಿ ಗ್ರಾಮಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು, ಗ್ರಾಮಸ್ಥರು ಗ್ರಾಮದಲ್ಲಿ ...
Vijaya Karnataka 10 Jul 2019, 5:00 am
ಗೋಕಾಕ : ತಾಲೂಕಿನ ಬಸಳಿಗುಂದಿ ಗ್ರಾಮಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು, ಗ್ರಾಮಸ್ಥರು ಗ್ರಾಮದಲ್ಲಿ ಸಾಮೂಹಿಕ ಶೌಚಾಲಯಗಳನ್ನು ನಿರ್ಮಿಸಿಕೊಡುವಂತೆ ಮನವಿ ಮಾಡಿದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು ಶೌಚಾಲಯಗಳನ್ನು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.
ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ''ಗ್ರಾಮದ ಅಭಿವೃದ್ಧಿ ಕಾರ್ಯಗಳಲ್ಲಿ ಎಲ್ಲರೂ ಒಂದಾಗಿ ಶ್ರಮಿಸಿದರೆ ಸರಕಾರದ ಯೋಜನೆಗಳು ಸದ್ಬಳಕೆಯಾಗುತ್ತವೆ'' ಎಂದು ತಿಳಿಸಿದ ಅವರು ಪ್ರತಿ ಚುನಾವಣೆಯಲ್ಲಿ ತಮಗೆ ಲೀಡ್ ನೀಡುತ್ತಿರುವ ಗ್ರಾಮದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಗ್ರಾಮಸ್ಥರ ಋುಣ ತೀರಿಸುವುದಾಗಿ ಹೇಳಿದರು.
ನ್ಯಾಯವಾದಿ ಮುತ್ತೆಪ್ಪ ಕುಳ್ಳೂರ, ಗಂಗಪ್ಪ ನಡುವಿನಮನಿ, ಸುರೇಶ ಮರಾಠೆ, ಗ್ರಾಪಂ ಸದಸ್ಯರು ಮತ್ತಿತರರು ಇದ್ದರು.
ವಾರದೊಳಗೆ ಬಿಜೆಪಿ ಸರಕಾರ :
''ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮೈತ್ರಿ ಸರಕಾರದಲ್ಲಿ ಅತೃಪ್ತಿಯಿಂದ ರಾಜೀನಾಮೆ ನೀಡುತ್ತಿರುವ ಶಾಸಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಬಿಜೆಪಿ ಸರಕಾರ ರಚನೆಗೆ ವೇದಿಕೆ ಸಿದ್ಧಗೊಂಡಿದೆ. ವಾರದೊಳಗೆ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಚನೆಯಾಗಲಿದೆ'' ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು ಶೌಚಾಲಯಗಳನ್ನು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.
ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ''ಗ್ರಾಮದ ಅಭಿವೃದ್ಧಿ ಕಾರ್ಯಗಳಲ್ಲಿ ಎಲ್ಲರೂ ಒಂದಾಗಿ ಶ್ರಮಿಸಿದರೆ ಸರಕಾರದ ಯೋಜನೆಗಳು ಸದ್ಬಳಕೆಯಾಗುತ್ತವೆ'' ಎಂದು ತಿಳಿಸಿದ ಅವರು ಪ್ರತಿ ಚುನಾವಣೆಯಲ್ಲಿ ತಮಗೆ ಲೀಡ್ ನೀಡುತ್ತಿರುವ ಗ್ರಾಮದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಗ್ರಾಮಸ್ಥರ ಋುಣ ತೀರಿಸುವುದಾಗಿ ಹೇಳಿದರು.
ನ್ಯಾಯವಾದಿ ಮುತ್ತೆಪ್ಪ ಕುಳ್ಳೂರ, ಗಂಗಪ್ಪ ನಡುವಿನಮನಿ, ಸುರೇಶ ಮರಾಠೆ, ಗ್ರಾಪಂ ಸದಸ್ಯರು ಮತ್ತಿತರರು ಇದ್ದರು.
ವಾರದೊಳಗೆ ಬಿಜೆಪಿ ಸರಕಾರ :
''ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮೈತ್ರಿ ಸರಕಾರದಲ್ಲಿ ಅತೃಪ್ತಿಯಿಂದ ರಾಜೀನಾಮೆ ನೀಡುತ್ತಿರುವ ಶಾಸಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಬಿಜೆಪಿ ಸರಕಾರ ರಚನೆಗೆ ವೇದಿಕೆ ಸಿದ್ಧಗೊಂಡಿದೆ. ವಾರದೊಳಗೆ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಚನೆಯಾಗಲಿದೆ'' ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.