ಆ್ಯಪ್ನಗರ

ವಿವಿಧೆಡೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

Vijaya Karnataka 23 Apr 2018, 5:00 am

ಬೆಳಗಾವಿ: ಜಿಲ್ಲೆಯಾದ್ಯಂತ ನೀತಿಸಂಹಿತೆ ಉಲ್ಲಂಘಿಸಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ನಗದು, ಮದ್ಯ ವಶಪಡಿಸಿಕೊಂಡಿರುವ ಪ್ರಕರಣ ದಾಖಲಾಗಿವೆ.

ಅರಬಾವಿ ವಿಧಾನಸಭಾ ಕ್ಷೇತ್ರದ ಗುರ್ಲಾಪುರ ಚೆಕ್‌ಪೋಸ್ಟ್‌ನಲ್ಲಿ 3.80 ಲಕ್ಷ ರೂ. ನಗದು ಹಾಗೂ 2 ಲಕ್ಷ ರೂ. ಮೌಲ್ಯದ ಕಾರು ವಶಪಪಡಿಸಿಕೊಳ್ಳಲಾಗಿದೆ. ಖಾನಾಪುರ ವಿಧಾನಸಭಾ ಕ್ಷೇತ್ರದ ಕಣಕುಂಬಿಯಲ್ಲಿ ಅಬಕಾರಿ ತಂಡದವರು 25 ಸಾವಿರ ರೂ. ಮೌಲ್ಯದ 45 ಲೀಟರ್‌ ಮದ್ಯ ಹಾಗೂ 1 ಲಕ್ಷ ರೂ. ಮೌಲ್ಯದ 2 ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಹೊನ್ನಳ್ಳಿ ಗ್ರಾಮದಲ್ಲಿ ಅಬಕಾರಿ ನಿರೀಕ್ಷಕರ ತಂಡ 2870 ರೂ. ಮೌಲ್ಯದ 11 ಲೀಟರ್‌ ಮದ್ಯ ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳಕರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಿಪಿಎಡ್‌ ಮೈದಾನದಿಂದ ಶನಿವಾರ ಖೂಟದವರೆಗೆ ರಾರ‍ಯಲಿ ಮುಖಾಂತರ ಆಗಮಿಸಿದ್ದರು. ರಾರ‍ಯಲಿಯಲ್ಲಿ ಭಾಗಹಿಸಿದ್ದ ಸುಮಾರು 2 ಸಾವಿರ ಜನ ಹಾಗೂ 36 ದ್ವಿಚಕ್ರ ವಾಹನ ಪರವಾನಿಗೆ ಪಡೆಯದ ಕಾರಣ ಕ್ಯಾಂಪ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಸ್‌. ಜಿಯಾವುಲ್ಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ