ಖಾನಾಪುರ: ವಿಶ್ವ ಪರಿಸರ ದಿನಾಚರಣೆ ದಿನದಂದು ಸಸಿಗಳನ್ನು ನೆಡುವುದು, ಪರಿಸರ ಸಂರಕ್ಷ ಣೆಯ ಬಗ್ಗೆ ಭಾಷಣ ಮಾಡುವುದು ಸಾಮಾನ್ಯವಾಗಿ ಎಲ್ಲೆಡೆ ಕಂಡುಬರುತ್ತದೆ. ಆದರೆ, ಖಾನಾಪುರ ತಾಲೂಕಿನ ಲೋಂಡಾ ಅರಣ್ಯ ವಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸಂಗ್ರಹಗೊಂಡಿದ್ದ ತ್ಯಾಜ್ಯ ತೆರವುಗೊಳಿಸಲು ವಿಶೇಷ ಅಭಿಯಾನ ಹಮ್ಮಿಕೊಂಡು ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಿದ್ದಾರೆ.
ತಾಲೂಕಿನ ಗುಂಜಿ ಗ್ರಾಮದಿಂದ ಲೋಂಡಾವರೆಗಿನ 13 ಕಿಮೀ ವ್ಯಾಪ್ತಿಯ ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವಾಹನ ಸವಾರರು ಮತ್ತು ಪ್ರಯಾಣಿಕರು ಎಸೆದಿದ್ದ ಬಾಟಲಿಗಳು, ಪ್ಲಾಸ್ಟಿಕ್ ಚೀಲಗಳು, ಆಹಾರದ ಪೊಟ್ಟಣ ಮತ್ತಿತರ ತ್ಯಾಜ್ಯಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿದರು. ಮಂಗಳವಾರ ಬೆಳಗ್ಗೆ ಪ್ರಾರಂಭಗೊಂಡ ಸ್ವಚ್ಛತಾ ಅಭಿಯಾನ ಬುಧವಾರ ಸಂಪನ್ನಗೊಂಡಿತು. ಅಭಿಯಾನದಲ್ಲಿ ಭಾಗವಹಿಸಿದ್ದ ಐವರು ಉಪವಲಯ ಅರಣ್ಯಾಧಿಕಾರಿಗಳು, 8 ಅರಣ್ಯ ರಕ್ಷ ಕರು, 40ಕ್ಕೂ ಹೆಚ್ಚು ಅರಣ್ಯ ವೀಕ್ಷ ಕರು ವಿವಿಧ ಗ್ರಾಮಗಳ ನಾಗರಿಕರು ಹಾಗೂ ಶಾಲಾ ವಿದ್ಯಾರ್ಥಿಗಳ ಸಹಯೋಗದಲ್ಲಿ ಒಟ್ಟು 5 ಟನ್ನಷ್ಟು ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಿದ್ದಾರೆ. ಇದರಲ್ಲಿ ಮುಕ್ಕಾಲು ಭಾಗದಷ್ಟು ಮದ್ಯದ ಬಾಟಲಿಗಳು ಸೇರಿವೆ ಎಂದು ಲೋಂಡಾ ಆರ್ಎಫ್ಒ ಬಸವರಾಜ ವಾಳದ ತಿಳಿಸಿದ್ದಾರೆ.
ಬೆಳಗಾವಿ ಡಿಎಫ್ಒ ಅಮರನಾಥ್, ಎಸಿಎಫ್ ಸಿ.ಬಿ. ಪಾಟೀಲ ಮಾರ್ಗದರ್ಶನದಲ್ಲಿ ನಡೆದ ಈ ಅಭಿಯಾನದಲ್ಲಿ ವಾಹನ ಸವಾರರು ಮತ್ತು ಪ್ರಯಾಣಿಕರಿಗೆ ಅರಣ್ಯದ ಮೂಲಕ ಹಾದುಹೋಗುವ ರಸ್ತೆಗಳ ಅಕ್ಕಪಕ್ಕ ತ್ಯಾಜ್ಯವನ್ನು ಅದರಲ್ಲೂ ಪ್ಲಾಸ್ಟಿಕ್ ಪದಾರ್ಥಗಳನ್ನು ಎಸೆಯದಂತೆ ತಿಳಿವಳಿಕೆ ನೀಡಲಾಗಿದೆ. ಅರಣ್ಯದಲ್ಲಿ ರಸ್ತೆ ಬದಿ ವಾಹನ ನಿಲ್ಲಿಸಿ ಮದ್ಯಪಾನ ಮಾಡುವವರ ವಿರುದ್ಧ ಕಾರ್ಯಾಚರಣೆ ನಡೆಸಿ ಕ್ರಮ ಜರುಗಿಸುವಂತೆ ಅಬಕಾರಿ ಮತ್ತು ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಫ್ರೀ ಝೋನ್ ಎಂಬ ಫಲಕಗಳನ್ನು ಅಳವಡಿಸಲಾಗಿದೆ. ಆದರೆ, ಅರಣ್ಯ ಮತ್ತು ವನ್ಯಜೀವಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಮಹತ್ತರವಾದ ಇಲಾಖೆಯ ಈ ಕಾರ್ಯದಲ್ಲಿ ವಾಹನ ಸವಾರರು, ಪ್ರಯಾಣಿಕರು ಮತ್ತು ಸಾರ್ವಜನಿಕರೂ ಸಹ ಪ್ಲಾಸ್ಟಿಕ್ ಮತ್ತು ತ್ಯಾಜ್ಯಗಳನ್ನು ರಸ್ತೆ ಬದಿ ಮತ್ತು ಅರಣ್ಯ ಪ್ರದೇಶದಲ್ಲಿ ಎಸೆಯದೇ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ತಾಲೂಕಿನ ಗುಂಜಿ ಗ್ರಾಮದಿಂದ ಲೋಂಡಾವರೆಗಿನ 13 ಕಿಮೀ ವ್ಯಾಪ್ತಿಯ ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವಾಹನ ಸವಾರರು ಮತ್ತು ಪ್ರಯಾಣಿಕರು ಎಸೆದಿದ್ದ ಬಾಟಲಿಗಳು, ಪ್ಲಾಸ್ಟಿಕ್ ಚೀಲಗಳು, ಆಹಾರದ ಪೊಟ್ಟಣ ಮತ್ತಿತರ ತ್ಯಾಜ್ಯಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿದರು. ಮಂಗಳವಾರ ಬೆಳಗ್ಗೆ ಪ್ರಾರಂಭಗೊಂಡ ಸ್ವಚ್ಛತಾ ಅಭಿಯಾನ ಬುಧವಾರ ಸಂಪನ್ನಗೊಂಡಿತು. ಅಭಿಯಾನದಲ್ಲಿ ಭಾಗವಹಿಸಿದ್ದ ಐವರು ಉಪವಲಯ ಅರಣ್ಯಾಧಿಕಾರಿಗಳು, 8 ಅರಣ್ಯ ರಕ್ಷ ಕರು, 40ಕ್ಕೂ ಹೆಚ್ಚು ಅರಣ್ಯ ವೀಕ್ಷ ಕರು ವಿವಿಧ ಗ್ರಾಮಗಳ ನಾಗರಿಕರು ಹಾಗೂ ಶಾಲಾ ವಿದ್ಯಾರ್ಥಿಗಳ ಸಹಯೋಗದಲ್ಲಿ ಒಟ್ಟು 5 ಟನ್ನಷ್ಟು ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಿದ್ದಾರೆ. ಇದರಲ್ಲಿ ಮುಕ್ಕಾಲು ಭಾಗದಷ್ಟು ಮದ್ಯದ ಬಾಟಲಿಗಳು ಸೇರಿವೆ ಎಂದು ಲೋಂಡಾ ಆರ್ಎಫ್ಒ ಬಸವರಾಜ ವಾಳದ ತಿಳಿಸಿದ್ದಾರೆ.
ಬೆಳಗಾವಿ ಡಿಎಫ್ಒ ಅಮರನಾಥ್, ಎಸಿಎಫ್ ಸಿ.ಬಿ. ಪಾಟೀಲ ಮಾರ್ಗದರ್ಶನದಲ್ಲಿ ನಡೆದ ಈ ಅಭಿಯಾನದಲ್ಲಿ ವಾಹನ ಸವಾರರು ಮತ್ತು ಪ್ರಯಾಣಿಕರಿಗೆ ಅರಣ್ಯದ ಮೂಲಕ ಹಾದುಹೋಗುವ ರಸ್ತೆಗಳ ಅಕ್ಕಪಕ್ಕ ತ್ಯಾಜ್ಯವನ್ನು ಅದರಲ್ಲೂ ಪ್ಲಾಸ್ಟಿಕ್ ಪದಾರ್ಥಗಳನ್ನು ಎಸೆಯದಂತೆ ತಿಳಿವಳಿಕೆ ನೀಡಲಾಗಿದೆ. ಅರಣ್ಯದಲ್ಲಿ ರಸ್ತೆ ಬದಿ ವಾಹನ ನಿಲ್ಲಿಸಿ ಮದ್ಯಪಾನ ಮಾಡುವವರ ವಿರುದ್ಧ ಕಾರ್ಯಾಚರಣೆ ನಡೆಸಿ ಕ್ರಮ ಜರುಗಿಸುವಂತೆ ಅಬಕಾರಿ ಮತ್ತು ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಫ್ರೀ ಝೋನ್ ಎಂಬ ಫಲಕಗಳನ್ನು ಅಳವಡಿಸಲಾಗಿದೆ. ಆದರೆ, ಅರಣ್ಯ ಮತ್ತು ವನ್ಯಜೀವಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಮಹತ್ತರವಾದ ಇಲಾಖೆಯ ಈ ಕಾರ್ಯದಲ್ಲಿ ವಾಹನ ಸವಾರರು, ಪ್ರಯಾಣಿಕರು ಮತ್ತು ಸಾರ್ವಜನಿಕರೂ ಸಹ ಪ್ಲಾಸ್ಟಿಕ್ ಮತ್ತು ತ್ಯಾಜ್ಯಗಳನ್ನು ರಸ್ತೆ ಬದಿ ಮತ್ತು ಅರಣ್ಯ ಪ್ರದೇಶದಲ್ಲಿ ಎಸೆಯದೇ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.