ಬೆಳಗಾವಿ: ಕಾಂಗ್ರೆಸ್ ಎಂದೂ ಜಾತಿ ಮೇಲೆ ರಾಜಕಾರಣ ಮಾಡಿಲ್ಲ, ನೀತಿ ಮೇಲೆ ನಮ್ಮ ಚುನಾವಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಹೊಂದಿರುವ ಎಲ್ಲರೂ ಒಂದೇ. ಲಿಂಗಾಯತರು ನಮ್ಮವರೇ. ಮರಾಠರು ನಮ್ಮ ಅಣ್ಣ-ತಮ್ಮಂದಿರು. ನಮಗೆ ಎಲ್ಲ ಜಾತಿ, ಧರ್ಮದವರೂ ಒಂದೇ. ಬಿಜೆಪಿಯವರೇ ಅವರನ್ನು ಬೇರೆ ಬೇರೆ ಮಾಡುತ್ತಿದ್ದಾರೆ," ಎಂದು ದೂರಿದರು.
'ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಏನು?' ಎನ್ನುವ ಸಚಿವ ಜಗದೀಶ್ ಶೆಟ್ಟರ್ ಮಾತಿಗೆ ತಿರುಗೇಟು ನೀಡಿದ ಡಿಕೆಶಿ, ''ಶೆಟ್ಟರ್ ಅವರಿಗೆ ಮಾತನಾಡಲು ಶಕ್ತಿ ಕೊಟ್ಟಿದ್ದೇ ನಾವು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಿದ್ದೇ ನಾವು. ಹಾಗಾಗಿ ಜಗದೀಶ್ ಶೆಟ್ಟರ್ ಇನ್ನಷ್ಟು ಮಾತನಾಡಲಿ, ಬೇಡ ಎನ್ನುವುದಿಲ್ಲ," ಎಂದರು.
ಸತೀಶ್ ಗೆಲ್ಲಿಸಲು ಸೂಚನೆ
ಬೆಳಗಾವಿ ಲೋಕಸಭಾ ಉಪ ಚುನಾವಣೆ ಪ್ರಚಾರದಲ್ಲಿರುವ ಡಿಕೆ ಶಿವಕುಮಾರ್ ಗುರುವಾರ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಚುನಾವಣಾ ಪ್ರಚಾರ ಕಾರ್ಯವೈಖರಿ ಕುರಿತು ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಬೆಳಗಾವಿ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮುಖಂಡರೊಂದಿಗೂ ಪ್ರತ್ಯೇಕ ಸಭೆ ನಡೆಸಿ, ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆಲುವಿಗೆ ಶತಪ್ರಯತ್ನ ನಡೆಸಬೇಕು ಎಂದು ಕರೆ ನೀಡಿದರು.
"ರಾಜ್ಯ ಮತ್ತು ಕೇಂದ್ರ ಸರಕಾರಗಳ ಆಡಳಿತ ವೈಫಲ್ಯ ಹಾಗೂ ಜನ ವಿರೋಧಿ ನೀತಿಗಳತ್ತ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು. ಕಮ್ಯುನಿಸ್ಟ್, ರೈತ ಸಂಘಟನೆ ಸೇರಿದಂತೆ ಇತರ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ಪಡೆದು ಅವರ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ನೋಡಿಕೊಳ್ಳಬೇಕು'', ಎಂದು ಸಲಹೆ ನೀಡಿದರು.
ಸಭೆಯಲ್ಲಿ ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ, ಕೆ.ಎಚ್. ಮಿನಿಯಪ್ಪ, ಎಚ್.ಎಂ. ರೇವಣ್ಣ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಲಿಂಗಾಯತ ಮತಗಳ ಸೆಳೆಯಲು ತಂತ್ರ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಲಿಂಗಾಯತ ಮತಗಳನ್ನು ಸೆಳೆಯಲು ತಂತ್ರ ರೂಪಿಸಿರುವುದಾಗಿ ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಲಿಂಗಾಯತ ಮತಗಳನ್ನು ಸೆಳೆಯಲು ತಂತ್ರ ರೂಪಿಸಲಾಗಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ನಾನು ಮತ್ತು ಮಾಜಿ ಸಚಿವ ಎ.ಬಿ. ಪಾಟೀಲ್ ನೇತೃತ್ವದಲ್ಲಿ ಲಿಂಗಾಯತ ಮತಗಳನ್ನು ಕಾಂಗ್ರೆಸ್ಗೆ ತರುವ ಕೆಲಸ ನಡೆದಿದೆ'', ಎಂದರು.
"ಸಿದ್ದರಾಮಯ್ಯ ಕೂಡ ಚುನಾವಣಾ ಪ್ರಚಾರಕ್ಕೆ ಬರುತ್ತಿದ್ದು ಇನ್ನಷ್ಟು ಬಲ ಬರಲಿದೆ. ಸಿದ್ದರಾಮಯ್ಯ ಸರಕಾರದ ಅನೇಕ ಯೋಜನೆಗಳು ಕಾಂಗ್ರೆಸ್ ಅಭ್ಯರ್ಥಿ ಕೈ ಹಿಡಿಯಲಿವೆ'', ಎಂದ ಅವರು, ''ಸದ್ಯದ ಬಿಜೆಪಿ ಸರಕಾರ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ಅಚ್ಚೇ ದಿನ್ ಎಲ್ಲೂ ಇಲ್ಲ. ಬೆಳಗಾವಿಯಿಂದಲೇ ಬಿಜೆಪಿಗೆ ಸ್ಪಷ್ಟ ಸಂದೇಶ ಹೋಗಲಿದೆ'', ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಏನು?' ಎನ್ನುವ ಸಚಿವ ಜಗದೀಶ್ ಶೆಟ್ಟರ್ ಮಾತಿಗೆ ತಿರುಗೇಟು ನೀಡಿದ ಡಿಕೆಶಿ, ''ಶೆಟ್ಟರ್ ಅವರಿಗೆ ಮಾತನಾಡಲು ಶಕ್ತಿ ಕೊಟ್ಟಿದ್ದೇ ನಾವು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಿದ್ದೇ ನಾವು. ಹಾಗಾಗಿ ಜಗದೀಶ್ ಶೆಟ್ಟರ್ ಇನ್ನಷ್ಟು ಮಾತನಾಡಲಿ, ಬೇಡ ಎನ್ನುವುದಿಲ್ಲ," ಎಂದರು.
ಸತೀಶ್ ಗೆಲ್ಲಿಸಲು ಸೂಚನೆ
ಬೆಳಗಾವಿ ಲೋಕಸಭಾ ಉಪ ಚುನಾವಣೆ ಪ್ರಚಾರದಲ್ಲಿರುವ ಡಿಕೆ ಶಿವಕುಮಾರ್ ಗುರುವಾರ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಚುನಾವಣಾ ಪ್ರಚಾರ ಕಾರ್ಯವೈಖರಿ ಕುರಿತು ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಬೆಳಗಾವಿ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮುಖಂಡರೊಂದಿಗೂ ಪ್ರತ್ಯೇಕ ಸಭೆ ನಡೆಸಿ, ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆಲುವಿಗೆ ಶತಪ್ರಯತ್ನ ನಡೆಸಬೇಕು ಎಂದು ಕರೆ ನೀಡಿದರು.
"ರಾಜ್ಯ ಮತ್ತು ಕೇಂದ್ರ ಸರಕಾರಗಳ ಆಡಳಿತ ವೈಫಲ್ಯ ಹಾಗೂ ಜನ ವಿರೋಧಿ ನೀತಿಗಳತ್ತ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು. ಕಮ್ಯುನಿಸ್ಟ್, ರೈತ ಸಂಘಟನೆ ಸೇರಿದಂತೆ ಇತರ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ಪಡೆದು ಅವರ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ನೋಡಿಕೊಳ್ಳಬೇಕು'', ಎಂದು ಸಲಹೆ ನೀಡಿದರು.
ಸಭೆಯಲ್ಲಿ ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ, ಕೆ.ಎಚ್. ಮಿನಿಯಪ್ಪ, ಎಚ್.ಎಂ. ರೇವಣ್ಣ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಲಿಂಗಾಯತ ಮತಗಳ ಸೆಳೆಯಲು ತಂತ್ರ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಲಿಂಗಾಯತ ಮತಗಳನ್ನು ಸೆಳೆಯಲು ತಂತ್ರ ರೂಪಿಸಿರುವುದಾಗಿ ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಲಿಂಗಾಯತ ಮತಗಳನ್ನು ಸೆಳೆಯಲು ತಂತ್ರ ರೂಪಿಸಲಾಗಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ನಾನು ಮತ್ತು ಮಾಜಿ ಸಚಿವ ಎ.ಬಿ. ಪಾಟೀಲ್ ನೇತೃತ್ವದಲ್ಲಿ ಲಿಂಗಾಯತ ಮತಗಳನ್ನು ಕಾಂಗ್ರೆಸ್ಗೆ ತರುವ ಕೆಲಸ ನಡೆದಿದೆ'', ಎಂದರು.
"ಸಿದ್ದರಾಮಯ್ಯ ಕೂಡ ಚುನಾವಣಾ ಪ್ರಚಾರಕ್ಕೆ ಬರುತ್ತಿದ್ದು ಇನ್ನಷ್ಟು ಬಲ ಬರಲಿದೆ. ಸಿದ್ದರಾಮಯ್ಯ ಸರಕಾರದ ಅನೇಕ ಯೋಜನೆಗಳು ಕಾಂಗ್ರೆಸ್ ಅಭ್ಯರ್ಥಿ ಕೈ ಹಿಡಿಯಲಿವೆ'', ಎಂದ ಅವರು, ''ಸದ್ಯದ ಬಿಜೆಪಿ ಸರಕಾರ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ಅಚ್ಚೇ ದಿನ್ ಎಲ್ಲೂ ಇಲ್ಲ. ಬೆಳಗಾವಿಯಿಂದಲೇ ಬಿಜೆಪಿಗೆ ಸ್ಪಷ್ಟ ಸಂದೇಶ ಹೋಗಲಿದೆ'', ಎಂದು ವಿಶ್ವಾಸ ವ್ಯಕ್ತಪಡಿಸಿದರು.