ಆ್ಯಪ್ನಗರ

ಬೆಳಗಾವಿ ಜಿಲ್ಲೆಯನ್ನು ವಿಭಜಿಸಲು ಶೀಘ್ರ ಸಿಎಂ ಜತೆ ಚರ್ಚೆ: ಈರಣ್ಣ ಕಡಾಡಿ

ಬೆಳಗಾವಿ ಜಿಲ್ಲೆಯನ್ನು ಆಡಳಿತಾತ್ಮಕ ದೃಷ್ಟಿಯಿಂದ ಚಿಕ್ಕೋಡಿ, ಗೋಕಾಕ ಜಿಲ್ಲೆಗಳಾಗಿ ವಿಭಜಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಬಳಿ ಚರ್ಚಿಸುವುದಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.

Vijaya Karnataka Web 1 Dec 2020, 5:10 pm
ಬೆಳಗಾವಿ: ರಾಜ್ಯದಲ್ಲೇ ದೊಡ್ಡದಾದ ಬೆಳಗಾವಿ ಜಿಲ್ಲೆಯನ್ನು ಆಡಳಿತಾತ್ಮಕ ದೃಷ್ಟಿಯಿಂದ ಚಿಕ್ಕೋಡಿ, ಗೋಕಾಕ ಜಿಲ್ಲೆಗಳಾಗಿ ವಿಭಜಿಸುವುದು ಸೂಕ್ತವಾಗಿದ್ದು ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದರು.
Vijaya Karnataka Web vijaya-karnataka


ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಜಿಲ್ಲೆ ವಿಭಜನೆ ಬಗ್ಗೆ ಯಾವುದೇ ಗೊಂದಲವಿದ್ದರೂ ಹಿಂದಿನ ವರದಿಗಳನ್ನು ಆಧಾರವಾಗಿ ಇಟ್ಟುಕೊಂಡು ಹೊಸ ಜಿಲ್ಲೆಗಳ ರಚನೆ ಮಾಡಬೇಕು. ಈ ಹಿಂದೆ ಜೆ.ಎಚ್‌.ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲಾ ವಿಭಜನೆ ಪ್ರಸ್ತಾಪ ಮಾಡಿದ್ದರು. ಆದರೆ, ಮರಾಠಿಗರ ಪ್ರಾಬಲ್ಯದ ನೆಪ ಮಾಡಿಕೊಂಡು ಜಿಲ್ಲೆಗಳ ರಚನೆ ಆಗಲಿಲ್ಲ. ಈಗ ಜಿಲ್ಲೆಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಹಾಗಾಗಿ ಚಿಕ್ಕೋಡಿ ಮತ್ತು ಗೋಕಾಕ ಜಿಲ್ಲೆಗಳಾಗಿ ಮಾಡಬೇಕು'' ಎಂದರು.

''ಬೆಳಗಾವಿ ಜಿಲ್ಲೆಯಲ್ಲಿ90 ಜಿಲ್ಲಾಪಂಚಾಯಿತಿ ಕ್ಷೇತ್ರಗಳಿವೆ. 31 ಸ್ಥಳೀಯ ಸಂಸ್ಥೆಗಳ ಆಡಳಿತ ಹೊಂದಿರುವ ಜಿಲ್ಲೆಯ ಆಡಳಿತ ವ್ಯವಸ್ಥೆ ವಿಕೇಂದ್ರೀಕರಣಗೊಳಿಸುವ ಅಗತ್ಯವಿದೆ. ಸಣ್ಣ ಜಿಲ್ಲೆಗಳು ಆಗುವುದರಿಂದ ಹೆಚ್ಚು ಅನುಕೂಲವಾಗುತ್ತದೆ. ಜಿಲ್ಲೆಯ 15 ಕಂದಾಯ ತಾಲೂಕುಗಳಲ್ಲಿ ಪ್ರತಿ ಜಿಲ್ಲೆಗೆ 5 ತಾಲೂಕು ಹಂಚಿಕೆ ಮಾಡಿ ವಿಭಜಿಸಿದರೆ ಅನುಕೂಲವಾಗುತ್ತದೆ'' ಎಂದು ಅವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ