ಆ್ಯಪ್ನಗರ

ವಕ್ಫ್ ಆಸ್ತಿ ಕಬಳಿಕೆ ವರದಿ ಮಂಡಿಸಲು ಆಗ್ರಹ

ವಿಕ ಸುದ್ದಿಲೋಕ ಬೆಳಗಾವಿ ವಕ್ಫ್ ಆಸ್ತಿ ಕಬಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ನೀಡಿರುವ ತನಿಖಾ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ...

ವಿಕ ಸುದ್ದಿಲೋಕ 6 Jul 2016, 5:00 am

ಬೆಳಗಾವಿ: ವಕ್ಫ್ ಆಸ್ತಿ ಕಬಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ನೀಡಿರುವ ತನಿಖಾ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಒತ್ತಾಯಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಸರಕಾರ ಸಾಮಾನ್ಯ ವ್ಯಕ್ತಿಯೊಬ್ಬ ಚಿಕ್ಕಪುಟ್ಟ ಅತಿಕ್ರಮಣ ಮಾಡಿದರೂ ಕಠಿಣ ಕ್ರಮ ಕೈಗೊಳ್ಳುತ್ತದೆ. ಆದರೆ ಇಲ್ಲಿ ಗಣ್ಯಾತಿಗಣ್ಯರು ವಕ್ಫ್ಗೆ ಸೇರಿದ 2 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಸಿದ್ದಾರೆ. ಆದರೂ ಏಕೆ ಮೌನವಾಗಿದೆ ಎಂದು ಪ್ರಶ್ನಿಸಿದರು.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್‌ ಮಾನಿಪ್ಪಾಡಿ ಅವರು ನೀಡಿದ್ದ ವಕ್ಫ್ ಆಸ್ತಿ ಕಬಳಿಕೆಗೆ ಸಂಬಂಧಿಸಿದ ಮೂಲ ವರದಿ ಆಧರಿಸಿ, ಲೋಕಾಯುಕ್ತ ತನಿಖೆ ಮಾಡಿ 28-3-2016ರಂದು ತನ್ನ ವರದಿ ನೀಡಿದೆ. ಈ ವರದಿ ಪ್ರಕಾರ ಸರಕಾರ ಕ್ರಮ ಕೈಗೊಂಡು ಪಾರದರ್ಶಕತೆ ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ಸಚಿವರಾಗಿದ್ದ ಖಮರುಲ್‌ ಇಸ್ಲಾಂ ಅವರು ವಕ್ಫ್ ಆಸ್ತಿ ಕಬಳಿಕೆ ವಿಷಯವಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದರು. ಇದರ ತನಿಖೆಗೆ ರಚಿತವಾಗಿದ್ದ ಹಕ್ಕುಬಾಧ್ಯತಾ ಸಮಿತಿ ಮಾಡಿರುವ ಶಿಫಾರಸಿನಂತೆ ಉಭಯ ಸದನಗಳಲ್ಲಿ ಚರ್ಚೆಯಾಗಿ ಖಮರುಲ್‌ ಇಸ್ಲಾಂ ಅವರ ದಂಡನೆ ನಿರ್ಧಾರವಾಗಬೇಕೆಂದು ಒತ್ತಾಯಿಸಿದರು.

ಅನ್ವರ್‌ ಮಾನಿಪ್ಪಾಡಿ ವರದಿ ಉಭಯ ಸದನಗಳಲ್ಲಿ ಮಂಡನೆಯಾಗಬೇಕೆಂದು ಬಿಜೆಪಿ ನಾಯಕ ಎಸ್‌.ಕೆ. ಕಾಂತಾ ಅವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದಾಗ ಅಡ್ವೋಕೇಟ್‌ ಜನರಲ್‌ ಅವರು ಮುಂದಿನ ಅಧಿಧಿವೇಶನದಲ್ಲಿ ಮಂಡಿಸುವುದಾಗಿ ಮುಚ್ಚಳಿಕೆ ಬರೆದು ಕೊಟ್ಟಿದ್ದರು. ಆ ಪ್ರಕಾರ ಈಗ ಆರಂಭವಾಗಿರುವ ಅಧಿಧಿವೇಶನದಲ್ಲಿ ಮಂಡನೆಯಾಗಬೇಕು ಎಂದು ಕೋರಿದರು.

ಚನ್ನಪ್ಪ ಅಥಣಿ, ಮಲ್ಲಪ್ಪ ತೇರದಾಳ ಹಾಗೂ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ