ಚಿಕ್ಕೋಡಿ: ಸಂತಾನ ಹರಣ ಶಸ್ತ್ರಚಿಕಿತ್ಸೆಗೆಂದು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ತಾಲೂಕಿನ ನವಲಿಹಾಳ ಗ್ರಾಮದ ಪ್ರತಿಭಾ ವಿರೇಂದ್ರ ಕಮತೆ (25) ಮೃತ ಮಹಿಳೆ. ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಅರವಳಿಕೆ ನೀಡುವಲ್ಲಿ ವ್ಯತ್ಯಾಸವಾಗಿದ್ದರಿಂದ ಪ್ರತಿಭಾ ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಎಸ್.ಎಸ್.ಗಡೇದ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ವೈದ್ಯರು ನನ್ನ ಪತ್ನಿಯ ಶವವನ್ನು ಚಿಕಿತ್ಸೆಗೆಂದು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪ್ರತಿಭಾ ಮೃತಪಟ್ಟ ಕುರಿತು ನಮಗ್ಯಾರಿಗೂ ವೈದ್ಯರು ಮಾಹಿತಿ ನೀಡಿಲ್ಲ ಎಂದು ಪ್ರತಿಭಾ ಪತಿ ವೀರೇಂದ್ರ ಹೇಳಿದರು.