ಬೆಳಗಾವಿ: ಮೂರು ವರ್ಷದ ಬಾಲಕಿ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿಅಪರಾಧಿಗೆ ಪ್ರಧಾನ ಜಿಲ್ಲಾಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಬೈಲಹೊಂಗಲ ತಾಲೂಕಿನ ಹಿರೇಬೆಳ್ಳಿಕಟ್ಟಿ ಗ್ರಾಮದ ನಿರ್ಮಲಾ ನಾಗಪ್ಪ ದೊಡವಾಡ ಜೀವಾವಧಿ ಶಿಕ್ಷೆಗೆ ಗುರಿಯಾದ ಮಹಿಳೆ.
ಕೌಟುಂಬಿಕ ದ್ವೇಷದಿಂದ ನಿರ್ಮಲಾ ದೊಡವಾಡ 2017ರ ನ.27 ರಂದು ಶಿವಪ್ಪ ಬಾರ್ಕಿ ಅವರ ಪುತ್ರಿ ರಾಜೇಶ್ವರಿಗೆ (ಮೂರೂವರೆ ವರ್ಷ) ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿಮೃತಪಟ್ಟಿದ್ದರು. ಈ ಕುರಿತು ಬಾಲಕಿ ತಂದೆ ದೊಡವಾಡ ಪೊಲೀಸ್ ಠಾಣೆಯಲ್ಲಿದೂರು ದಾಖಲಿಸಿದ್ದರು.
ಚನ್ನಮ್ಮನ ಕಿತ್ತೂರು ಠಾಣೆ ಪೊಲೀಸ್ ನಿರೀಕ್ಷಕ ರಾಘವೇಂದ್ರ ಹವಾಲ್ದಾರ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಆರ್.ಜೆ. ಸತೀಶಸಿಂಗ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕ ಎಸ್.ಆರ್.ಶಿಂಧೆ ವಕಾಲತ್ತು ವಹಿಸಿದ್ದರು.
ಬೈಲಹೊಂಗಲ ತಾಲೂಕಿನ ಹಿರೇಬೆಳ್ಳಿಕಟ್ಟಿ ಗ್ರಾಮದ ನಿರ್ಮಲಾ ನಾಗಪ್ಪ ದೊಡವಾಡ ಜೀವಾವಧಿ ಶಿಕ್ಷೆಗೆ ಗುರಿಯಾದ ಮಹಿಳೆ.
ಕೌಟುಂಬಿಕ ದ್ವೇಷದಿಂದ ನಿರ್ಮಲಾ ದೊಡವಾಡ 2017ರ ನ.27 ರಂದು ಶಿವಪ್ಪ ಬಾರ್ಕಿ ಅವರ ಪುತ್ರಿ ರಾಜೇಶ್ವರಿಗೆ (ಮೂರೂವರೆ ವರ್ಷ) ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿಮೃತಪಟ್ಟಿದ್ದರು. ಈ ಕುರಿತು ಬಾಲಕಿ ತಂದೆ ದೊಡವಾಡ ಪೊಲೀಸ್ ಠಾಣೆಯಲ್ಲಿದೂರು ದಾಖಲಿಸಿದ್ದರು.
ಚನ್ನಮ್ಮನ ಕಿತ್ತೂರು ಠಾಣೆ ಪೊಲೀಸ್ ನಿರೀಕ್ಷಕ ರಾಘವೇಂದ್ರ ಹವಾಲ್ದಾರ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಆರ್.ಜೆ. ಸತೀಶಸಿಂಗ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕ ಎಸ್.ಆರ್.ಶಿಂಧೆ ವಕಾಲತ್ತು ವಹಿಸಿದ್ದರು.