ಆ್ಯಪ್ನಗರ

ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ಖಂಡನೀಯ

ಯರಗಟ್ಟಿ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ ಪ್ರವೇಶಿಸಿದ ಇಬ್ಬರು ಮಹಿಳೆಯರಿಗೆ ಸಹಕರಿಸುವ ಮೂಲಕ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತಂದಿರುವ ಕೇರಳ ಸರಕಾರದ ...

Vijaya Karnataka 5 Jan 2019, 8:18 pm
ಯರಗಟ್ಟಿ : ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ ಪ್ರವೇಶಿಸಿದ ಇಬ್ಬರು ಮಹಿಳೆಯರಿಗೆ ಸಹಕರಿಸುವ ಮೂಲಕ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತಂದಿರುವ ಕೇರಳ ಸರಕಾರದ ನೀತಿ ಖಂಡಿಸಿ ಸ್ಥಳೀಯ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ಸದಸ್ಯರು ಶುಕ್ರವಾರ ಉಪ ತಹಸೀಲ್ದಾರ್‌ ಕಚೇರಿಯ ಸಿಬ್ಬಂದಿಗೆ ಮನವಿ ಸಲ್ಲಿಸಿದರು.
Vijaya Karnataka Web womens entry into ayyappaswamy temple is condemnable
ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ಖಂಡನೀಯ


10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಅಯ್ಯಪ್ಪಸ್ವಾಮಿ ದೇಗುಲ ಪ್ರವೇಶ ನಿಷೇಧವು ಅಲ್ಲಿನ ಸಂಪ್ರದಾಯ ಹಾಗೂ ನಂಬಿಕೆ. ಈ ಸಾಂಪ್ರದಾಯಿಕ ನಿಯಮಕ್ಕೆ ವಿರುದ್ಧವಾಗಿ ಕೆಲ ನಾಸ್ತಿಕ ಮಹಿಳೆಯರನ್ನು ಪೊಲೀಸ್‌ ಸರ್ಪಗಾವಲಿನಲ್ಲಿ ನುಗ್ಗಿಸಿದ ಕೇರಳ ಸರಕಾರದ ಕ್ರಮ ಖಂಡನೀಯ. ಕೇಂದ್ರ ಸರಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ದೇವರ ನಾಡನ್ನು ಶಾಂತಗೊಳಿಸಬೇಕು. ದೇವಸ್ಥಾನಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ರಕ್ಷಣೆ, ಸೂಕ್ತ ಭದ್ರತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಯ್ಯಪ್ಪ ಮಾಲಿಧಾರಿಗಳಾದ ಈರಣ್ಣ ಹುಲ್ಲೂರ, ವಿಜಯ ಬಡಿಗೇರ, ಮಂಜುನಾಥ ಬಡ್ಲಿ, ಗುರು ಬಂಟನೂರ, ಆನಂದ ಬಡಿಗೇರ, ಹನಮಂತ ಕಡಕೋಳ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ