ಆ್ಯಪ್ನಗರ

ಪ್ರಜಾಪ್ರಭುತ್ವದ ಹಬ್ಬದಲ್ಲಿ ಮಹಿಳೆಯರ ಜವಾಬ್ದಾರಿ ದೊಡ್ಡದು

ಬೆಳಗಾವಿ: ಚುನಾವಣೆ ಪ್ರಜಾಪ್ರಭುತ್ವದ ಹಬ್ಬ....

Vijaya Karnataka 20 Apr 2019, 5:00 am
ಬೆಳಗಾವಿ : ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಯಾವುದೇ ಹಬ್ಬದಲ್ಲಿ ಹೆಚ್ಚಿನ ಶ್ರಮ, ಕೆಲಸ ಮಹಿಳೆಯರ ಮೇಲಿರುತ್ತದೆ. ಅಂತಹ ಜವಾಬ್ದಾರಿಯನ್ನು ಈ ಚುನಾವಣೆಯಲ್ಲಿ ಸಮರ್ಥವಾಗಿ ನಿಭಾಯಿಸೋಣ. ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೆಲ್ಲಿಸೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ ಕರೆ ನೀಡಿದರು.
Vijaya Karnataka Web BLG-1904-2-52-19 TEJASWINI


ನಗರ ಮಿಲೇನಿಯಂ ಗಾರ್ಡನ್‌ನಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪ್ರಚಾರಾರ್ಥ ಆಯೋಜಿಸಿದ್ದ ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿದರು.

ದೇಶ ಮೊದಲು ಎನ್ನುವುದು ಬಿಜೆಪಿ ತತ್ವ. ಕಳೆದ ಐದು ವರ್ಷಗಳಲ್ಲಿ ಕೇಂದ್ರದ ಬಿಜೆಪಿ ಸರಕಾರ ದೇಶದ ಜನಸಾಮಾನ್ಯರಿಗಾಗಿ ಸಾಕಷ್ಟು ಯೋಜನೆ ಜಾರಿಗೆ ತಂದಿದೆ. ಅದರಲ್ಲಿ ಅಗ್ಗದ ದರದಲ್ಲಿ ಔಷಧ, ಪರಿಸರ ಸ್ನೇಹಿ ಗೊಬ್ಬರಗಳು ದೇಶವನ್ನು ಆರ್ಥಿಕವಾಗಿ ಮೇಲೆತ್ತಿವೆ ಎಂದರು.

ಉಡುಪಿ ಶಾಸಕ ರಘುಪತಿ ಭಟ್‌, ಬೆಳಗಾವಿ ಶಾಸಕರಾದ ಅನಿಲ ಬೆನಕೆ, ಅಭಯ ಪಾಟೀಲ, ಬಿಜೆಪಿ ಮುಖಂಡ ಎಂ.ಬಿ.ಝಿರಲಿ ಸುರೇಶ ಅಂಗಡಿ ಪರ ಮತಯಾಚಿಸಿದರು. ಶಿಲ್ಪಾ ಜಗದೀಶ ಶೆಟ್ಟರ್‌, ಮಂಗಲಾ ಅಂಗಡಿ, ಮಂಗೇಶ ಪವಾರ ಮತ್ತು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ