ಆ್ಯಪ್ನಗರ

ಬಿಜೆಪಿಗೆ ಹೋಗುವುದಾಗಿ ಫೋನ್‌ನಲ್ಲಿ ಜೋಕ್‌ ಮಾಡಿದ್ದೇ ಅಷ್ಟೇ: ಗಣೇಶ್‌ ಹುಕ್ಕೇರಿ

ನಮ್ಮ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸಿದ್ದರಾಮಯ್ಯ, ಪರಮೇಶ್ವರ್‌ ಅವರು ಎಲ್ಲ ರೀತಿಯ ಸಹಕಾರ ಕೊಟ್ಟಿದ್ದಾರೆ. ಪಕ್ಷ ಬಿಟ್ಟು ಹೋಗಿ ಕೈ ಕೊಡುವ ಇಚ್ಛೆ ನನಗಿಲ್ಲ ಎಂದಿದ್ದಾರೆ ಗಣೇಶ್‌ ಹುಕ್ಕೇರಿ

Vijaya Karnataka Web 13 Jan 2019, 12:33 pm
ಬೆಳಗಾವಿ: ಬಿಜೆಪಿ ಸೇರುತ್ತೇನೆ ಎಂದು ಫೋನ್‌ನಲ್ಲಿ ತಮಾಷೆಗಾಗಿ ಹೇಳಿದ್ದೆ. ಇದಕ್ಕೆ ಯಾವುದೇ ರೀತಿಯ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್‌ ಹುಕ್ಕೇರಿ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ಗಣೇಶ್‌ ಹುಕ್ಕೇರಿ
ಗಣೇಶ್‌ ಹುಕ್ಕೇರಿ


ಖಾಸಗಿ ವಾಹಿನಿ ಜತೆ ಮಾತನಾಡಿದ ಗಣೇಶ್‌ ಹುಕ್ಕೇರಿ, ಕಾಂಗ್ರೆಸ್‌ ಪಕ್ಷ ನಮ್ಮ ಕುಟುಂಬಕ್ಕೆ ಎಲ್ಲವನ್ನೂ ನೀಡಿದೆ. ಆ ಪಕ್ಷವನ್ನು ಬಿಡುವ ಮಾತೇ ಇಲ್ಲ ಎಂದರು.

ಲೋಕಸಭೆ ಚುನವಣೆಗೆ ಈಗಾಗಲೇ ಸಿದ್ಧತೆ ಆರಂಭಿಸಲಾಗಿದೆ. ಈ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುತ್ತಿದೆ. ಬೇರೆ ಪಕ್ಷಕ್ಕೆ ಹೋಗುವ ಪ್ರಮೇಯವೇ ಇಲ್ಲ ಗಣೇಶ್‌ ಹುಕ್ಕೇರಿ ತಿಳಿಸಿದ್ದಾರೆ.

ನಮ್ಮ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸಿದ್ದರಾಮಯ್ಯ, ಪರಮೇಶ್ವರ್‌ ಅವರು ಎಲ್ಲ ರೀತಿಯ ಸಹಕಾರ ಕೊಟ್ಟಿದ್ದಾರೆ. ಪಕ್ಷ ಬಿಟ್ಟು ಹೋಗಿ ಕೈ ಕೊಡುವ ಇಚ್ಛೆ ನನಗಿಲ್ಲ ಎಂದು ಗಣೇಶ್ ಹುಕ್ಕೇರಿ ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಗಣೇಶ್‌ ಹುಕ್ಕೇರಿ ತಂದೆ ಸಂಸದ ಪ್ರಕಾಶ್‌ ಹುಕ್ಕೇರಿ, ನಾವ್ಯಾರೂ ಬಿಜೆಪಿಗೆ ಹೋಗುವುದಿಲ್ಲ. ಇವೆಲ್ಲ ಮಾಧ್ಯಮಗಲ್ಲಿ ಬರುತ್ತಿರುವ ವದಂತಿ ಸುದ್ದಿ ಅಷ್ಟೇ ಎಂದರು.

ಈ ಬಗ್ಗೆ ನನ್ನ ಮಗ ಗಣೇಶ್‌ ಹುಕ್ಕೇರಿ ಸ್ಪಷ್ಟನೆ ನೀಡಿದ್ದಾನೆ. ಲೋಕಸಭಾ ಚುನಾವಣೆ ಮುಗಿಯುವವರೆಗೂ ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದೂ ಅವರು ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಗುರಿ. ಇದಕ್ಕಾಗಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಕಾಶ್ ಹುಕ್ಕೇರಿ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ