ಆ್ಯಪ್ನಗರ

ರಾಜಕೀಯದಲ್ಲಿ ಸದಾ ಸಕ್ರಿಯರು ಯಕ್ಸಂಬಾದವ್ರು!

ವಿನಾಯಕ ಮೇತ್ರೆ ಯಕ್ಸಂಬಾ ಕರ್ನಾಟಕ- ಮಹಾರಾಷ್ಟ್ರ ...

Vijaya Karnataka 23 Aug 2019, 5:00 am
ಯಕ್ಸಂಬಾ: ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣ ರಾಜಕೀಯ- ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿ ಕಾಯ್ದುಕೊಂಡಿದೆ.
Vijaya Karnataka Web BEL-21EXA2


ಇಲ್ಲಿನ ನಿವಾಸಿ ಶಶಿಕಲಾ ಜೊಲ್ಲೆ ನಿಪ್ಪಾಣಿ ಕ್ಷೇತ್ರದ ಶಾಸಕಿಯಾಗಿ ಈಗ ಸಂಪುಟ ದರ್ಜೆ ಸಚಿವರಾಗಿದ್ದಾರೆ. ಅಣ್ಣಾಸಾಹೇಬ ಜೊಲ್ಲೆ ಚಿಕ್ಕೋಡಿ ಕ್ಷೇತ್ರದ ಸಂಸದರಾಗಿದ್ದಾರೆ. ಚಿಕ್ಕೋಡಿ ಕ್ಷೇತ್ರದ ಮಾಜಿ ಸಂಸದ, ಕಾಂಗ್ರೆಸ್‌ ಸರಕಾರದಲ್ಲಿ ಸಚಿವರಾಗಿದ್ದ ಪ್ರಕಾಶ್‌ ಹುಕ್ಕೇರಿ ಹಾಗೂ ಅವರ ಪುತ್ರ ಶಾಸಕ ಗಣೇಶ್‌ ಹುಕ್ಕೇರಿ ಯಕ್ಸಂಬಾದವರು. ರಾಜ್ಯದಲ್ಲಿ ಯಾವುದೇ ಪಕ್ಷ ದ ಸರಕಾರ ಇದ್ದರೂ ಯಕ್ಸಂಬಾದ ಒಬ್ಬರು ಸಚಿವರಾಗಿ ಅಥವಾ ನಿಗಮ ಮಂಡಳಿಗಳ ಅಧ್ಯಕ್ಷ ರಾಗಿ ಅಧಿಕಾರದಲ್ಲಿ ಇರುತ್ತಾರೆ ಎಂದರೆ ತಪ್ಪಾಗಲಾರದು.

ಅಣ್ಣಾಸಾಹೇಬ ಜೊಲ್ಲೆ ಅವರು ಮೊದಲು ಜಿಪಂ ಸದಸ್ಯರಾಗಿದ್ದರು. ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಸಂಸ್ಥಾಪಕರೂ ಹೌದು. ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳದ ಅಧ್ಯಕ್ಷ ರಾಗಿ, ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ರಾಗಿ, ದೂಧಗಂಗಾ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಸಂಚಾಲಕರಾಗಿ, ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಂಚಾಲಕರಾಗಿ, ನ್ಯಾಷನಲ್‌ ಕೋ-ಆಪ್‌. ಡೇರಿ ಫೆಡರೇಶನ್‌ ಆಫ್‌ ಇಂಡಿಯಾ ಸಂಚಾಲಕರಾಗಿ, ಕ್ರೀಡಾ ಉತ್ತೇಜನ ಮತ್ತು ಅಭಿವೃದ್ಧಿ ಕೋ-ಆಪ್‌ ಲಿ. ಸಂಚಾಲಕರಾಗಿ... ಹೀಗೆ ಹತ್ತು ಹಲವಾರು ಹುದ್ದೆಗಳನ್ನು ನಿಭಾಯಿಸಿದ ಅನುಭವ ಅವರಿಗಿದೆ.

ರಾಜ್ಯ ಸರಕಾರದ ಏಕೈಕ ಮಹಿಳಾ ಮಂತ್ರಿಯಾಗಿರುವ ಶಶಿಕಲಾ ಜೊಲ್ಲೆ ಯಕ್ಸಂಬಾದಲ್ಲಿ ಸಹಕಾರ ಶಿಕ್ಷ ಣ ಮತ್ತು ಸಮಾಜ ಸೇವಾ ಸಂಸ್ಥೆಯನ್ನು 1995ರಲ್ಲಿ ಸ್ಥಾಪಿಸಿದ್ದಾರೆ. ನಿಪ್ಪಾಣಿ ಕ್ಷೇತ್ರದಿಂದ ಬಿಜೆಪಿ ಶಾಸಕಿಯಾಗಿ ಎರಡು ಬಾರಿ ಆಯ್ಕೆಯಾಗಿದ್ದಾರೆ.

ಹುಕ್ಕೇರಿ ಫ್ಯಾಮಿಲಿ ಪವರ್‌:
1994ರಿಂದ ಸತತ ಐದು ಬಾರಿ ಚಿಕ್ಕೋಡಿ- ಸದಲಗಾ ಕ್ಷೇತ್ರ ಪ್ರತಿನಿಧಿಸಿ ಕಾಂಗ್ರೆಸ್‌ ಸರಕಾರದಲ್ಲಿ ಸಚಿವರಾಗಿ, ನಂತರ ಚಿಕ್ಕೋಡಿ ಕ್ಷೇತ್ರದ ಸಂಸದರಾಗಿದ್ದ ಪ್ರಕಾಶ್‌ ಹುಕ್ಕೇರಿ ಹಾಗೂ ಸಮ್ಮಿಶ್ರ ಸರಕಾರದಲ್ಲಿ ಸರಕಾರದ ಮುಖ್ಯ ಸಚೇತರಾಗಿದ್ದ ಗಣೇಶ್‌ ಹುಕ್ಕೇರಿ ಅವರೂ ಯಕ್ಸಂಬಾದವರು. ಪ್ರಕಾಶ್‌ ಹುಕ್ಕೇರಿ ಅವರು ಯಕ್ಸಂಬಾ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಗಿ ರಾಜಕೀಯ ಜೀವನ ಆರಂಭಿಸಿದ್ದಾರೆ. ನಂತರ ಜಿಪಂ ಸದಸ್ಯರಾಗಿ, ವಿಧಾನ ಪರಿಷತ್‌ ಸದಸ್ಯರಾಗಿ, ಸರಕಾರದ ಮುಖ್ಯ ಸಚೇತರಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಗಣೇಶ್‌ ಹುಕ್ಕೇರಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ, ಯಕ್ಸಂಬಾ, ಮಾಂಜರಿ ಜಿಪಂ ಸದಸ್ಯರಾಗಿ, ಜಿಲ್ಲಾ ಪಂಚಾಯಿತಿ ಆರೋಗ್ಯ ಸ್ಥಾಯಿ ಸಮಿತಿ ಸದಸ್ಯರಾಗಿ, ಸಕ್ಕರೆ ಮಹಾಮಂಡಳದ ಸದಸ್ಯರಾಗಿ, ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಶಾಸಕರಾಗಿ ಕಾರ‍್ಯ ನಿರ್ವಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ