ಆ್ಯಪ್ನಗರ

ಯುವಕ ಕಾಣೆ; ಪ್ರಕರಣ ದಾಖಲು

ಬೆಳಗಾವಿ: ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ...

Vijaya Karnataka 26 Jan 2020, 5:00 am
ಬೆಳಗಾವಿ: ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರ ಹೋದ ಯುವಕ ಮರಳಿ ಮನೆಗೆ ಬಾರದೆ ಕಾಣೆಯಾಗಿರುವ ಕುರಿತು ನಗರದ ಮಾರ್ಕೇಚ್‌ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ. ಶಿವಾಜಿನಗರದ ನಿಯಾಜ ಅಬ್ದಲ್‌ ರೆಹಮಾನ ಕಂದಗಲ…(24) ಕಾಣೆಯಾದ ಯುವಕ.
Vijaya Karnataka Web 25NIYAZ082744
ನಿಯಾಜ


ಜ.3ರಂದು ಬೆಳಗ್ಗೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದ ಈತ ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾನೆ ಎಂದು ಯುವಕನ ತಂದೆ ಅಬ್ದಲ್‌ರೆಹಮಾನ ಕಂದಗಲ ದೂರು ದಾಖಲಿಸಿದ್ದಾರೆ. ಕಾಣೆಯಾದ ನಿಯಾಜ 6.3 ಅಡಿ ಎತ್ತರ, ದುಂಡುಮುಖ, ಸಾದಾ ಮೈಕಟ್ಟು, ಗೋದಿಗೆಂಪು ಮೈಬಣ್ಣ ಹೊಂದಿದ್ದಾನೆ. ಕನ್ನಡ, ಹಿಂದಿ, ಮರಾಠಿ ಭಾಷೆ ಮಾತನಾಡುತ್ತಾನೆ. ಯುವಕ ಪತ್ತೆಯಾದಲ್ಲಿಮಾರ್ಕೇಟ್‌ ಠಾಣೆಯ ದೂ. 0831-2405242 ಸಂಪರ್ಕಿಸುವಂತೆ ಪೊಲೀಸ್‌ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ