ಆ್ಯಪ್ನಗರ

ರಸ್ತೆ ಅಪಘಾತ: ಬೆಳಗಾವಿ ಯುವತಿ ಬಲಿ ಪಡೆದ ಗೋವಾ ಶಾಸಕನ ಪುತ್ರ

ಇಲ್ಲಿನ ಗಾಂಧಿ ನಗರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ.

Vijaya Karnataka 9 Oct 2018, 10:41 am
ಬೆಳಗಾವಿ: ಗೋವಾ ಶಾಸಕ ಗೈನ್ ಟಿಕ್ಲೊ ಅವರ ಪುತ್ರ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಮೃತಪಟ್ಟು ಆಕೆಯ ಸಹೋದರಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿಯ ಗಾಂಧಿನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Vijaya Karnataka Web BLG-0810-2-52-8MAHESH4


ಆಜಾದ್‌ ನಗರದದ ನಿವಾಸಿಯಾಗಿರುವ ಸ್ಯಾನಿಯತ್‌ ವಾಹಿದ್‌ ಬಿಸ್ತಿ (18) ಮೃತರು. ಸಮ್ರೀನ್‌ ಬಿಸ್ತಿ ಗಂಭೀರ ಗಾಯಗೊಂಡಿದ್ದಾರೆ.

ಸಹೋದರಿಯರಿಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಶಾಸಕನ ಪುತ್ರ ಕೈಲ್ ಟೆಕ್ಲೊ ಚಲಾಯಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಕಾರು ಬೆಂಗಳೂರಿನಿಂದ ಗೋವಾಗೆ ತೆರಳುತ್ತಿರುವಾಗ ಘಟನೆ ನಡೆದಿದೆ. ಘಟನೆ ಸಂಬಂಧ ಗೋವಾ ಶಾಸಕನ ಪುತ್ರನನ್ನು ಸಂಚಾರಿ ಉತ್ತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾರಿಗೆ ಬೆಂಕಿ: ಅಪಘಾತ ಸಂಭವಿಸುತ್ತಿದ್ದಂತೆ ಉದ್ರಿಕ್ತರು ಕಾರಿಗೆ ಕಲ್ಲೆಸೆದು ಬೆಂಕಿ ಹಚ್ಚುವ ಯತ್ನ ನಡೆಸಿದ್ದಾರೆ. ಕಾರಿನ ಕೆಲ ಭಾಗ ಜಖಂಗೊಂಡಿದ್ದು, ಕಾರಿಗೆ ಹಾನಿ ಮಾಡಿದವರ ಪೈಕಿ ಓರ್ವನನ್ನು ಮಾಳಮಾರುತಿ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ