ಆ್ಯಪ್ನಗರ

ಅಪಘಾತ: ಯುವಕ ಸಾವು

ಬೈಲಹೊಂಗಲ : ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಬಳಿ ಪ್ರಮುಖ ರಸ್ತೆಯಲ್ಲಿರುವ ಪೆಟ್ರೋಲ್‌ ಬಂಕ್‌ ಹತ್ತಿರ ಮೋಟರ್‌ ಸೈಕಲ್‌ ಸವಾರ ಎದುರಿಗೆ ಬರುತ್ತಿದ್ದ ...

Vijaya Karnataka 11 Jul 2019, 10:55 pm
ಬೈಲಹೊಂಗಲ : ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಬಳಿ ಪ್ರಮುಖ ರಸ್ತೆಯಲ್ಲಿರುವ ಪೆಟ್ರೋಲ್‌ ಬಂಕ್‌ ಹತ್ತಿರ ಮೋಟರ್‌ ಸೈಕಲ್‌ ಸವಾರ ಎದುರಿಗೆ ಬರುತ್ತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.
Vijaya Karnataka Web youth died in an accident
ಅಪಘಾತ: ಯುವಕ ಸಾವು


ಬೈಕ್‌ ಚಲಾಯಿಸುತ್ತಿದ್ದ ಅರವಳ್ಳಿ ಗ್ರಾಮದ ಚವಡಯ್ಯ ಅಜ್ಜಪ್ಪ ಬಡಸದ (24) ಮೃತ ಯುವಕ. ಬೈಕ್‌ ಹಿಂದೆ ಕುಳಿತಿದ್ದ ಕೆಂಗಾನೂರ ಗ್ರಾಮದ ರಾಜೇಸಾಬ ಬಾಬುಸಾಬ ತಲ್ಲೂರ (22) ಗಂಭೀರ ಗಾಯಗೊಂಡಿದ್ದು, ಈತನನ್ನು ಚಿಕಿತ್ಸೆಗಾಗಿ ಬೆಳಗಾವಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೋಟರ್‌ ಸೈಕಲ್‌ನವರು ಬೆಳಗಾವಿಯಿಂದ ಬೈಲಹೊಂಗಲಕ್ಕೆ ಬರುವಾಗ ಈ ದುರ್ಘಟನೆ ನಡೆದಿದೆ. ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ