ಕರ್ತವ್ಯಕ್ಕೆ ಅಡ್ಡಿ: ಶಿಕ್ಷೆ ವಿಧಿಸಿ ತೀರ್ಪು
ಸರಕಾರಿ ಪಿಯು ಕಾಲೇಜಿನ ಆವರಣದಲ್ಲಿ ಮದ್ಯಪಾನ ಮಾಡುತ್ತಿದ್ದವರನ್ನು ತಡೆಯಲು ಹೋದ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ಕು ಜನರಿಗೆ ನ್ಯಾಯಾಧೀಶ ಲಕ್ಷ್ಮಿಕಾಂತ ಜಾನಕಿರಾಂ ಮಿಸ್ಕಿನ್ ಅವರು 1 ವರ್ಷ ಮತ್ತು 11 ತಿಂಗಳು ಕಠಿಣ ಶಿಕ್ಷೆ, ತಲಾ 2.500 ರೂ.ದಂಡ ವಿಧಿಸಿ ಇತ್ತೀಚೆಗೆ ತೀರ್ಪು ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ಅವರ ಕೆಲಸಕ್ಕೆ ಅಡ್ಡಿಪಡಿಸಲಾಗಿತ್ತು.
ವಿಕ ಸುದ್ದಿಲೋಕ 25 Feb 2016, 7:03 am
ಸಿರುಗುಪ್ಪ: ಸರಕಾರಿ ಪಿಯು ಕಾಲೇಜಿನ ಆವರಣದಲ್ಲಿ ಮದ್ಯಪಾನ ಮಾಡುತ್ತಿದ್ದವರನ್ನು ತಡೆಯಲು ಹೋದ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ಕು ಜನರಿಗೆ ನ್ಯಾಯಾಧೀಶ ಲಕ್ಷ್ಮಿಕಾಂತ ಜಾನಕಿರಾಂ ಮಿಸ್ಕಿನ್ ಅವರು 1 ವರ್ಷ ಮತ್ತು 11 ತಿಂಗಳು ಕಠಿಣ ಶಿಕ್ಷೆ, ತಲಾ 2.500 ರೂ.ದಂಡ ವಿಧಿಸಿ ಇತ್ತೀಚೆಗೆ ತೀರ್ಪು ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ಅವರ ಕೆಲಸಕ್ಕೆ ಅಡ್ಡಿಪಡಿಸಲಾಗಿತ್ತು. ಪ್ರಕರಣ ಸ್ಥಳೀಐ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಆರೋಪ ರುಜುವಾತಾಗಿದ್ದರಿಂದ ಬಿ.ಲಕ್ಷ್ಮಣ್, ಕೆ.ವಿ.ಗಂಗಾಧರ್, ಹೊನ್ನಳ್ಳಿ ಹೊನ್ನೂರ, ಬಿ. ಗಂಗಪ್ಪ ಅವರಿಗೆ ಶಿಕ್ಷೆ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಸಿಪಿಐ ವಿ.ಆರ್.ಏಳ್ಗಿ, ಪಿಎಸ್ಐ ಎಂ.ಹಾಲೇಶ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಸರಕಾರಿ ಅಭಿಯೋಜಕ ಮಂಜುನಾಥ ಬೇರ್ಗಿ ಸರಕಾರದ ಪರವಾಗಿ ವಾದ ಮಂಡಿಸಿದ್ದರು.