ಆ್ಯಪ್ನಗರ

ಸಿಗರೇನಹಳ್ಳಿ ಘಟನೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧರಣಿ

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಿಗರೇನಹಳ್ಳಿ ದಲಿತರಿಗೆ ದೇಗುಲ ಪ್ರವೇಶ ನಿರಾಕರಿಸಿ, ಕಾನೂನು ಸುವ್ಯವಸ್ಥೆ ಹದಗೆಡಿಸಿದ ಜಾತಿವಾದಿ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿ ಪದಾಧಿಕಾರಿಗಳು ಶನಿವಾರ ತಹಸಿಲ್ ಕಚೇರಿ ಮುಂದೆ ಧರಣಿ ನಡೆಸಿದರು.

ವಿಕ ಸುದ್ದಿಲೋಕ 3 Apr 2016, 4:44 pm
ಹಗರಿಬೊಮ್ಮನಹಳ್ಳಿ; ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಿಗರೇನಹಳ್ಳಿ ದಲಿತರಿಗೆ ದೇಗುಲ ಪ್ರವೇಶ ನಿರಾಕರಿಸಿ, ಕಾನೂನು ಸುವ್ಯವಸ್ಥೆ ಹದಗೆಡಿಸಿದ ಜಾತಿವಾದಿ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿ ಪದಾಧಿಕಾರಿಗಳು ಶನಿವಾರ ತಹಸಿಲ್ ಕಚೇರಿ ಮುಂದೆ ಧರಣಿ ನಡೆಸಿದರು.
Vijaya Karnataka Web
ಸಿಗರೇನಹಳ್ಳಿ ಘಟನೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧರಣಿ


ಸಮಿತಿಯ ಸಂಚಾಲಕಿ ಬಿ.ಮಾಳಮ್ಮ ಮಾತ ನಾಡಿ, ಸಿಗರೇನಹಳ್ಳಿ ಘಟನೆಯಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ದಲಿತರ ಮೇಲಿನ ಶೋಷಣೆ ನಿರಂತರವಾಗಿದೆ. ಭೂಮಾಲೀಕರು ಇಂದಿಗೂ ಗ್ರಾಮಗಳನ್ನು ಹಿಡಿತದಲ್ಲಿಟ್ಟುಕೊಂಡು ದಲಿತರನ್ನು ಮೂಲ ಹಕ್ಕುಗಳಿಂದ ವಂಚಿತರನ್ನಾಗಿಸಿದ್ದಾರೆ. ದೇಗುಲಗಳಿಗೆ ಪ್ರವೇಶ ನಿರಾಕರಿಸುವುದು ಪಾಳೇಗಾರಿಕೆ ಸಂಸ್ಕೃತಿಯನ್ನು ತೋರುವಂತಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ, ಅಶಾಂತಿಗೆ ಕಾರಣವಾದ ಶಕ್ತಿಗಳಿಗೆ ಕಡಿವಾಣ ಹಾಕಬೇಕು. ರಾಜ್ಯವ್ಯಾಪಿ ದಲಿತರು ಆತಂಕದಿಂದ ಜೀವಿಸುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸಿಪಿಎಂ ತಾಲೂಕು ಕಾರ್ಯದರ್ಶಿ ಎಸ್.ಜಗನ್ನಾಥ್ ಮಾತನಾಡಿದರು. ತಹಸೀಲ್ದಾರ್ ಆನಂದಪ್ಪ ನಾಯಕ ಅವರಿಗೆ ಮನವಿ ಸಲ್ಲಿಸಿದರು. ಸಮಿತಿಯ ಮುಖಂಡರಾದ ಸಿ.ಹನುಮಂತಪ್ಪ, ಜಿ.ರಮೇಶ, ಎಚ್.ಮಂಜುನಾಥ, ಅಂಜಿನಪ್ಪ, ಎಂ.ಆನಂದಪ್ಪ, ರಾಜ್ಯದೇವದಾಸಿ ವಿಮೋಚನೆ ಸಂಘದ ಎಚ್.ಬಿ.ಮೈಲಮ್ಮ, ಪಿ.ಚಾಂದ್‌ಬೀ, ಎ.ಹನುಮಕ್ಕ, ದೊಡ್ಡಬಸಮ್ಮ, ತಟ್ನೆಮ್ಮ, ನಾಗರತ್ನ, ಮಂಜುಳಾ, ಎ.ಆರ್.ಮಲ್ಲಮ್ಮ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ