ಆ್ಯಪ್ನಗರ

‘ನಿರ್ಲಕ್ಷ್ಯವೇ ಕುಸಿತಕ್ಕೆ ಕಾರಣ’

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಭಾರಿ ಅಧೋಗತಿ ತಲುಪುವುದಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮುನ್ನೆಚ್ಚರಿಕೆ ಕೊರತೆಯೇ ಕಾರಣ ಎಂದು ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ದೂರಿದರು.

ವಿಕ ಸುದ್ದಿಲೋಕ 9 Jun 2016, 5:29 am
ಬಳ್ಳಾರಿ; ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಭಾರಿ ಅಧೋಗತಿ ತಲುಪುವುದಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮುನ್ನೆಚ್ಚರಿಕೆ ಕೊರತೆಯೇ ಕಾರಣ ಎಂದು ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ದೂರಿದರು.
Vijaya Karnataka Web
‘ನಿರ್ಲಕ್ಷ್ಯವೇ ಕುಸಿತಕ್ಕೆ ಕಾರಣ’


ನಗರದ ಬಿಡಿಎಎ ಪುಟ್ಬಾಲ್ ಮೈದಾನದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲೆಯ 91 ಸರಕಾರಿ ಶಾಲೆಗಳಿಗೆ 793 ಜತೆ ಡೆಸ್ಕ್, ಬೆಂಚು ವಿತರಣೆ ಕಾರ್ಯಖ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಹಿಂದೆ ಜಿಲ್ಲೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಇಂತಹ ಕೆಟ್ಟ ಪರಿಸ್ಥಿತಿ ಇದ್ದಿಲ್ಲ. ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮುಂದಿನ ದಿನಗಳಲ್ಲಿಯಾದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಶಿಕ್ಷಣದತ್ತ ಹೆಚ್ಚಿನ ಗಮನಹರಿಸುವ ಅಗತ್ಯವಿದೆ ಎಂದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಬಡವರಿಗಾಗಿ ಜನಧನ್, ಪ್ರಧಾನಿ ಸುರಕ್ಷಾ, ಮುದ್ರಾ ಯೋಜನೆ ಜಾರಿಗೊಳಿಸಿದ್ದಾರೆ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೈ-ಕ ಪ್ರಾದೇಶಿಕ ಕಚೇರಿ ನಿರ್ದೇಶಕ ಕೆ. ಬೂದಪ್ಪಗೌಡ, ಪದಾಧಿಕಾರಿಗಳಾದ ಕೃಷ್ಣಪ್ರಸಾದ್, ನಿರಂಜನ್, ಜನಾರ್ದನ ರೆಡ್ಡಿ, ವಿನಯ್ ಕುಮಾರ್ ಸೇರಿದಂತೆ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ