ಆ್ಯಪ್ನಗರ

ವಿದ್ಯುತ್ ತಗುಲಿ ಕಾರ್ಮಿಕರಿಬ್ಬರ ಸಾವು

ಇಲ್ಲಿನ ಎಂ.ಜೆ. ನಗರದಲ್ಲಿ ಕುಡಿವ ನೀರಿನ ಪೈಪ್‌ಲೈನ್ ಕಾಮಗಾರಿ ವೇಳೆ ನೆಲದಲ್ಲಿದ್ದ ತಂತಿಯಿಂದ ವಿದ್ಯುತ್ ಪ್ರವಹಿಸಿ, ಕೂಲಿ ಕಾರ್ಮಿಕರಿಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.

ವಿಕ ಸುದ್ದಿಲೋಕ 4 Jan 2017, 8:16 am
ಹೊಸಪೇಟೆ: ಇಲ್ಲಿನ ಎಂ.ಜೆ. ನಗರದಲ್ಲಿ ಕುಡಿವ ನೀರಿನ ಪೈಪ್‌ಲೈನ್ ಕಾಮಗಾರಿ ವೇಳೆ ನೆಲದಲ್ಲಿದ್ದ ತಂತಿಯಿಂದ ವಿದ್ಯುತ್ ಪ್ರವಹಿಸಿ, ಕೂಲಿ ಕಾರ್ಮಿಕರಿಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.
Vijaya Karnataka Web
ವಿದ್ಯುತ್ ತಗುಲಿ ಕಾರ್ಮಿಕರಿಬ್ಬರ ಸಾವು


ತಾಲೂಕಿನ ಕಲ್ಲಹಳ್ಳಿ ಗ್ರಾಮದ ಕಣಿಮೆಪ್ಪ (35) ಮತ್ತು ಹೊನ್ನೂರಪ್ಪ (38) ಮೃತರು. ಖಾಸಗಿ ಆಸ್ಪತ್ರೆಯೊಂದರ ಎದುರು ದಿನದ 24 ತಾಸು ಕುಡಿವ ನೀರಿನ ಪೈಪ್‌ಲೈನ್ ಕಾಮಗಾರಿ ಹಿನ್ನೆಲೆಯಲ್ಲಿ ಈ ಕಾರ್ಮಿಕರು ಗುಂಡಿ ತೋಡುತ್ತಿದ್ದರು. ನೆಲದ ಆಳದಲ್ಲಿದ್ದ ಕೇಬಲ್‌ಗೆ ಹಾರೆ ತಾಕಿದೆ. ಈ ಸಂದರ್ಭದಲ್ಲಿ ಹಾರೆ ಹಿಡಿದ ಕಣಿಮೆಪ್ಪ ಅವರ ಮೈಗೆ ವಿದ್ಯುತ್ ಪ್ರವಹಿಸಿದೆ. ಅವರ ರಕ್ಷಣೆಗೆ ಮುಂದಾದ ಹೊನ್ನೂರಪ್ಪ ಅವರ ದೇಹಕ್ಕೂ ವಿದ್ಯುತ್ ಪ್ರವಹಿಸಿದೆ. ಅಸ್ವಸ್ಥರಾದ ಕಾರ್ಮಿಕರನ್ನು ಖಾಸಗಿ ಆಸ್ಪತ್ರೆಗೆ ತಕ್ಷಣ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದ ಅವರು ಆಸ್ಪತ್ರೆಯಲ್ಲಿ ಅಸುನೀಗಿದರು. ಅವರ ಜತೆ ಕೆಲಸ ಮಾಡುತ್ತಿದ್ದ ತಿಮ್ಮಯ್ಯ, ಹುಲುಗಪ್ಪ ಮತ್ತು ಬರಮಪ್ಪ ಅಪಾಯದಿಂದ ಪಾರಾಗಿದ್ದಾರೆ. ನಗರದ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ