ಆ್ಯಪ್ನಗರ

ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಗಣಿ ಗುತ್ತಿಗೆ ಹಳೆ ಅರ್ಜಿಗಳನ್ನು ವಿಲೇವಾರಿಗೆ ಸಂಬಂಧಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಶುಕ್ರವಾರ ತಡೆಯಾಜ್ಞೆ ನೀಡಿದೆ.

ವಿಕ ಸುದ್ದಿಲೋಕ 14 Jan 2017, 7:39 am
ಬಳ್ಳಾರಿ: ಗಣಿ ಗುತ್ತಿಗೆ ಹಳೆ ಅರ್ಜಿಗಳನ್ನು ವಿಲೇವಾರಿಗೆ ಸಂಬಂಧಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಶುಕ್ರವಾರ ತಡೆಯಾಜ್ಞೆ ನೀಡಿದೆ.
Vijaya Karnataka Web
ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ


ಗಣಿ ಮತ್ತು ಖನಿಜ ಅಭಿವೃದ್ಧಿ ನಿಯಂತ್ರಣ (ಎಂಎಂಆರ್‌ಡಿ) ಕಾಯಿದೆಗೆ ಕೇಂದ್ರ ಸರಕಾರ ಇತ್ತೀಚೆಗೆ ತಿದ್ದುಪಡಿ ತಂದಿದೆ. ಗಣಿ ಗುತ್ತಿಗೆ ಪರವಾನಗಿ ನೀಡಲು ಸಲ್ಲಿಸಿರುವ ಹಳೆಯ ಅರ್ಜಿಗಳನ್ನು ಎರಡು ವರ್ಷಗಳಲ್ಲಿ ಇತ್ಯರ್ಥ ಪಡಿಸಬೇಕೆಂದು ಕೇಂದ್ರ ಸರಕಾರ ಸೂಚಿಸಿತ್ತು. ಅವಧಿ ಮುಗಿಯುತ್ತಿರುವುದರಿಂದ ಅರ್ಜಿಗಳ ಶೀಘ್ರ ವಿಲೇವಾರಿಗೆ ಕ್ರಮಕೈಗೊಳ್ಳುವಂತೆ ಅರ್ಜಿದಾರರು ಹೈಕೋರ್ಟ್ ಮೂಲಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಆದೇಶ ತಂದಿದ್ದರು.

ಆದೇಶದಂತೆ ಜ.11ರಂದು ಹಳೆಯ ಅರ್ಜಿಗಳ ವಿಲೇವಾರಿಗೆ ಕೊನೆಯ ದಿನವಾಗಿತ್ತು. ಆದರೆ, ಅರ್ಹ 2-3 ಅರ್ಜಿಗಳನ್ನು ಮಾತ್ರ ಇಲಾಖೆಯು ವಿಲೇವಾರಿ ಮಾಡಿತ್ತು. ಇನ್ನುಳಿದ ಅರ್ಜಿಗಳು ತಿರಸ್ಕೃತವಾಗಿದ್ದವು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸುಪ್ರೀಂ ಕೋರ್ಟ್‌ಗೆ ಒಂದು ವಾರದ ಹಿಂದೆ ಮೇಲ್ಮನವಿ ಸಲ್ಲಿಸಿತ್ತು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೇಲ್ಮನವಿ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿ ಲೋಕೂರ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ