ಆ್ಯಪ್ನಗರ

ಸಾಲಬಾಧೆ ತಾಳದ ರೈತ ಆತ್ಮಹತ್ಯೆ

ಸಾಲಬಾಧೆ ತಾಳದ, ತಾಲೂಕಿನ ಹಳೇಕೋಟೆ ಗ್ರಾಮದ ರೈತ ವೀರೇಶ (48), ವಿಷ ಕುಡಿದು ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಕ ಸುದ್ದಿಲೋಕ 21 Feb 2017, 8:10 am
ಸಿರುಗುಪ್ಪ (ಬಳ್ಳಾರಿ): ಸಾಲಬಾಧೆ ತಾಳದ, ತಾಲೂಕಿನ ಹಳೇಕೋಟೆ ಗ್ರಾಮದ ರೈತ ವೀರೇಶ (48), ವಿಷ ಕುಡಿದು ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web
ಸಾಲಬಾಧೆ ತಾಳದ ರೈತ ಆತ್ಮಹತ್ಯೆ


ಅವರ ಹೆಸರಲ್ಲಿ 2.70ಎಕರೆ ಜಮೀನಿದೆ. ಪತ್ನಿ ಹಾಗೂ ಐವರು ಪುತ್ರಿಯರು ಹಾಗೂ ಮೂವರು ಗಂಡು ಮಕ್ಕಳಿದ್ದಾರೆ. ಮಕ್ಕಳ ಮದುವೆ ಹಾಗೂ ಕೃಷಿ ಚಟುವಟಿಕೆಗೆ ಖಾಸಗಿಯಾಗಿ ಸಾಲಮಾಡಿದ್ದರು. ಸಾಲದ ವಿವರ ಸಿಕ್ಕಿಲ್ಲ. ವಿಷ ಕುಡಿದು ಅಸ್ವಸ್ಥರಾದ ವೀರೇಶ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಸಾರ್ವಜನಿಕ ಆಸ್ಪತ್ರೆಗೆ ತಹಸೀಲ್ದಾರ್ ಎಂ.ಸುನಿತಾ ಭೇಟಿ ನೀಡಿದ್ದರು. ತೆಕ್ಕಲಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ