ಆ್ಯಪ್ನಗರ

‘ಕನ್ನಡಿಗರನ್ನು ಒಕ್ಕಲೆಬ್ಬಿಸಿದರೆ, ಸಹಿಸಲ್ಲ’

ಗೋವಾದಲ್ಲಿ ಸ್ವಾರ್ಥ ಸಾಧನೆಗಾಗಿ ಅಲ್ಲಿನ ಕನ್ನಡಿಗರನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ. ಇದನ್ನು ನಾವು ಸಹಿಸುವುದಿಲ್ಲ ಎಂದು ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ, ಶಾಸಕ ಕೆ.ಶಿವಮೂರ್ತಿ ಹೇಳಿದರು.

ವಿಕ ಸುದ್ದಿಲೋಕ 7 Apr 2017, 8:22 am
ಬಳ್ಳಾರಿ: ಗೋವಾದಲ್ಲಿ ಸ್ವಾರ್ಥ ಸಾಧನೆಗಾಗಿ ಅಲ್ಲಿನ ಕನ್ನಡಿಗರನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ. ಇದನ್ನು ನಾವು ಸಹಿಸುವುದಿಲ್ಲ ಎಂದು ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ, ಶಾಸಕ ಕೆ.ಶಿವಮೂರ್ತಿ ಹೇಳಿದರು.
Vijaya Karnataka Web
‘ಕನ್ನಡಿಗರನ್ನು ಒಕ್ಕಲೆಬ್ಬಿಸಿದರೆ, ಸಹಿಸಲ್ಲ’


ನಗರದ ಜಿಲ್ಲಾ ಧಿಕಾರಿಗಳ ಕಚೇರಿಯಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಗೋವಾದಲ್ಲಿ ಲಂಬಾಣಿ ಸೇರಿದಂತೆ ಕೆಲವೊಂದು ಸಮುದಾಯಗಳನ್ನು ಒಕ್ಕಲೆಬ್ಬಿಸುವುದನ್ನು ಕೈ ಬಿಡಬೇಕು. ಇಂತಹ ವಿಷಯಗಳನ್ನು ಅಲ್ಲಿನ ರಾಜ್ಯ ಮತ್ತು ಕೇಂದ್ರ ಸರಕಾರವೂ ಗಂಭೀರವಾಗಿ ಪರಿಗಣಿಸಬೇಕು. ರಾಜ್ಯದ ಸಿಎಂ ಅವರು, ಗೋವಾದ ಸಿಎಂ ಜತೆಯಲ್ಲಿ ಮಾತನಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ದಾಖಲೆ ಇಲ್ಲದ 58,000 ಜನವಸತಿ ಪ್ರದೇಶಗಳಿವೆ. ಇವುಗಳನ್ನು ದಾಖಲೆಗೆ ಒಳಪಡಿಸಿ, ಹಕ್ಕು ಪತ್ರ ನೀಡಬೇಕು. ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡಬೇಕೆಂದು ವಿಧಾನಸಭೆಯ ಹೊರಗಡೆ ಮತ್ತು ಒಳಗಡೆ ಧ್ವನಿ ಎತ್ತಿರುವೆ. ಭೂ ಸುಧಾರಣೆಯ ಮುಂದುವರಿದ ಭಾಗವಾಗಿ ವಾಸಿಸುವನೇ ನೆಲದ ಒಡೆಯನಾಗಬೇಕೆಂಬುದು ನಮ್ಮ ಉದ್ದೇಶ. ಕೆಲವೊಬ್ಬರು ನೀರಾವರಿ ಪ್ರದೇಶಗಳಲ್ಲಿ, ದೇವಸ್ಥಾನಗಳಿಗೆ ಸೇರಿದ ಪ್ರದೇಶದಲ್ಲಿ, ಅರಣ್ಯ ಪ್ರದೇಶಗಳಲ್ಲಿ, ಸಾಮಾಜಿಕ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಇಂತಹವರಿಗೆ ಹಕ್ಕು ಪತ್ರ ಪಡೆಯಲು ಈಗಾಗಲೇ ಕಾಯಿದೆ ಜಾರಿಯಾಗಿದೆ. ಕೂಡಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಮತ್ತು ತಹಸೀಲ್ದಾರರು ಕ್ರಮ ಕೈಗೊಂಡು ಅಲ್ಲಿನ ಜನರಿಗೆ ಹಕ್ಕು ಪತ್ರ ವಿತರಿಸಬೇಕು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ