ಆ್ಯಪ್ನಗರ

ಹಂಪಿಗೆ ಸೌಲಭ್ಯ ಕಲ್ಪಿಸಲು ಒತ್ತು

ವಿಶ್ವ ವಿಖ್ಯಾತ ಹಂಪಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಇದೀಗ ಸೌಲಭ್ಯ ಕಲ್ಪಿಸುವತ್ತ ಗಮನ ಹರಿಸಿದೆ.

ವಿಕ ಸುದ್ದಿಲೋಕ 30 Jul 2017, 5:39 pm
ಹೊಸಪೇಟೆ: ವಿಶ್ವ ವಿಖ್ಯಾತ ಹಂಪಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಇದೀಗ ಸೌಲಭ್ಯ ಕಲ್ಪಿಸುವತ್ತ ಗಮನ ಹರಿಸಿದೆ.
Vijaya Karnataka Web
ಹಂಪಿಗೆ ಸೌಲಭ್ಯ ಕಲ್ಪಿಸಲು ಒತ್ತು


ಬ್ಯಾಟರಿ ಚಾಲಿತ ವಾಹನಗಳನ್ನು ಈಗಾಗಲೇ ಓಡಿಸಲಾಗುತ್ತಿದ್ದು, ಸಾರಿಗೆ ಬಸ್ ವ್ಯವಸ್ಥೆ ಬಲಪಡಿಸಲು ನಿರ್ಧರಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ಸ್ನೇಹಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಂದು ಕಡೆಯಲ್ಲಿ ಪ್ರವಾಸಿಗರು ಹೆಚ್ಚಳವಾಗುತ್ತಿದ್ದರೆ, ಇನ್ನೊಂದಡೆಯಲ್ಲಿ ಹಂಪಿಯಲ್ಲಿ ನಿಯಮಗಳ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಒದಗಿಸಲು ತೊಡಕಾಗುತ್ತಿದೆ. ಇದನ್ನು ಮನಗಂಡಿರುವ ಇಲಾಖೆ, ನಿಯಮದ ಅನ್ವಯವೇ ಪ್ರವಾಸಿಗರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಯೋಜಿಸಿದೆ.

ಪ್ರವಾಸಿಗರು ಹೆಚ್ಚಳ?: ಹಂಪಿಯ ಸ್ಮಾರಕಗಳ ಗುಚ್ಛವನ್ನು ಯುನೆಸ್ಕೊ ವಿಶ್ವ ಪರಂಪರೆ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿರುವುದರಿಂದ ಹಂಪಿಗೆ ದೇಶ-ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. 2015ರಲ್ಲಿ 25 ಲಕ್ಷ ದೇಶಿ ಪ್ರವಾಸಿಗರು ಹಂಪಿಗೆ ಭೇಟಿ ನೀಡಿದರೆ, 1ಲಕ್ಷ 10 ಸಾವಿರ ವಿದೇಶಿ ಪ್ರವಾಸಿಗರು ಆಗಮಿಸಿ ಸ್ಮಾರಕಗಳನ್ನು ವೀಕ್ಷಿಸಿದ್ದಾರೆ. 2016ರಲ್ಲಿ 1ಲಕ್ಷ 20 ಸಾವಿರ ವಿದೇಶಿ ಪ್ರವಾಸಿಗರು ಹಾಗೂ 28 ಲಕ್ಷ ದೇಶೀ ಪ್ರವಾಸಿಗರು ಹಂಪಿಗೆ ಭೇಟಿ ನೀಡಿದ್ದಾರೆ. ಈ ವರ್ಷ ಜುಲೈ 28ರ ವರೆಗೆ 30 ಸಾವಿರಕ್ಕೂ ಅಧಿಕ ವಿದೇಶೀ ಹಾಗೂ 13ಲಕ್ಷಕ್ಕೂ ಹೆಚ್ಚು ದೇಶೀ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂಬುದು ಪ್ರವಾಸೋದ್ಯಮ ಇಲಾಖೆಯ ಮಾಹಿತಿಯಾಗಿದೆ.

ಹೆಚ್ಚಿನ ಸಂಖ್ಯೆ: ಹಂಪಿ ಪ್ರದೇಶದ ಶ್ರೀ ವಿರೂಪಾಕ್ಷೇಶ್ವರ, ರಥಬೀದಿಯ ಸಾಲು ಮಂಟಪ, ಕಮಲ ಮಹಲ್, ಆನೆಲಾಯ, ಮಹಾನವಮಿ ದಿಬ್ಬ, ಕಲ್ಲಿನ ತೇರು, ವಿಜಯ ವಿಠ್ಠಲ್ ದೇಗುಲ ಸೇರಿದಂತೆ ನಾನಾ ಸ್ಮಾರಕಗಳನ್ನು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುತ್ತಿದ್ದಾರೆ. ಒಂದು ಕಡೆಯಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ಆರೋಪವೂ ಇದೆ. ಇದರಿಂದ ಪಾರಾಗಲು ಪ್ರವಾಸೋದ್ಯಮ ಇಲಾಖೆ ಕೂಡ ಯೋಜನೆ ರೂಪಿಸುತ್ತಿದೆ.

----
ಹಂಪಿಗೆ ಹೆಚ್ಚಿನ ಪ್ರಮಾಣದಲ್ಲಿ ದೇಶ-ವಿದೇಶಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅದಕ್ಕೆ ತಕ್ಕಂತೆ ಸುರಕ್ಷೆ ಹಾಗೂ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗಿದೆ.

- ಮೋತಿಲಾಲ್ ಲಮಾಣಿ, ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಹಂಪಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ