ಸಂಡೂರು : ಮೂರು ಬಾರಿ ಶಾಸಕ, ಎರಡು ಬಾರಿ ಪರಿಷತ್ ಸದಸ್ಯನಾದ ನನಗೆ ಅಡ್ರಸ್ ಇಲ್ಲ ಎಂದು ಹೇಳಿದ ಬಿಜೆಪಿ ಶಾಸಕ ಶ್ರೀರಾಮುಲು ತಾವು ಮೊಳಕಾಲ್ಮೂರು, ಬಾದಾಮಿಗೆ ಸ್ಪರ್ಧಿಸಲು ತೆರಳಿದ್ದು ಯಾಕೆ ಎಂದು ಲೋಕಸಭೆ ಉಪ ಚುನಾವಣೆಗೆ ಸ್ಪರ್ಧಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಪ್ರಶ್ನಿಸಿದರು.
ಪಟ್ಟಣಕ್ಕೆ ಸಮೀಪದ ಕೃಷ್ಣಾನಗರದ ಲಾಡ್ ಸಹೋದರರ ಗಣಿ ಕಂಪನಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆಯನ್ನು ಉದ್ದೇಶಿಸಿ ಇತ್ತೀಚೆಗೆ ಮಾತನಾಡಿದರು. ಸಂದರಾಗಿದ್ದ ಶ್ರೀರಾಮುಲು ಮತ್ತು ಅವರ ಸಹೋದರಿ ತಮ್ಮ ಅಧಿಕಾರವಧಿಯಲ್ಲಿ ಸಂಸತ್ತಿನಲ್ಲಿ ಜಿಲ್ಲೆಯ ಪರವಾಗಿ ಎಷ್ಟುಬಾರಿ ಧ್ವನಿ ಎತ್ತಿದ್ದಾರೆ ಎಂದು ಬಹಿರಂಗ ಪಡಿಸಬೇಕು. ರೈಲ್ವೆ ಸಮಸ್ಯೆ, ಗಣಿಗಾರಿಕೆಯಿಂದಾದ ತೊಂದರೆ, ಮೂಲ ಸೌಕರ್ಯ ಅಭಿವೃದ್ಧಿಯ ವಿಷಯದಲ್ಲಿ ಅವರು ಮಾಡಿದ ಸಾಧನೆಗಳ ಹೆಜ್ಜೆ ಗುರುತುಗಳನ್ನು ತೋರಿಸಲಿ ಎಂದು ಸವಾಲು ಎಸೆದರು.
ರೈತರ ಸಾಲ ಮನ್ನಾ ಮಾಡಲು ತಯಾರಿಲ್ಲದ ಪ್ರಧಾನಿ ನರೇಂದ್ರ ಮೋದಿ ಕೈಗಾರಿಕೋದ್ಯಮಿಗಳ 2.38 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದು, ಅವರ ನಿಲುವನ್ನು ತೋರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಿಂದ ವಾರ್ಷಿಕ 12 ಲಕ್ಷ ಕೋಟಿ ರೂ. ಉಳಿತಾಯವಾದದ್ದನ್ನು ಏನು ಮಾಡಿದರು. 63 ಕೋಟಿ ರೂ.ಗಳ ಬೋಪೋರ್ಸ್ ಹಗರಣದ ಬಗ್ಗೆ ಮಾತನಾಡುವ ಪ್ರಧಾನಿ ಮೋದಿ 39 ಸಾವಿರ ಕೋಟಿ ರೂ.ಗಳ ರೆಫಲ್ ಡೀಲ್ನ್ನು ಯಾವುದೇ ಅನುಭವವಿಲ್ಲದ, ಡೀಲ್ಗೂ ಮುನ್ನ 10 ದಿನಗಳ ಹಿಂದೆ ನೋಂದಣಿಯಾದ ರಿಲಯನ್ಸ್ಗೆ ನೀಡುವ ಮೂಲಕ ಸರಕಾರಿ ಸ್ವಾಮ್ಯದ ಎಚ್ಎಎಲ್ಗೆ ಅವಮಾನ ಮಾಡಿದ್ದಾರೆ. ಇತ್ತೀಚೆಗೆ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ತೊಂದರೆಯಲ್ಲಿದೆ ಎಂದು ಹೇಳಿದ್ದಕ್ಕೆ ಮೋದಿ ಮರು ಉತ್ತರ ನೀಡಲು ಸಾದ್ಯವಾಗಿಲ್ಲ ಎಂದು ಕಿಡಿಕಾರಿದರು.
ಶಾಸಕ ಈ.ತುಕಾರಾಮ್ ಮಾತನಾಡಿ, ಶ್ರೀರಾಮುಲು 3 ಉಪ ಚುನಾವಣೆಗಳಿಗೆ ಕಾರಣರಾಗಿದ್ದಾರೆ. ಮಾಜಿ ಸಂಸದೆ ಶಾಂತಾ ಜಿಲ್ಲೆಗೆ ನೀಡಿದ ಕೊಡುಗೆ ಏನು, ಪದೇ ಪದೆ ಉಪ ಚುನಾವಣೆಗಳಿಗೆ ಕಾರಣವಾಗುವ ಮೂಲಕ ಆಡಳಿತ ವ್ಯವಸ್ಥೆಯ ಸಮಯ ವ್ಯರ್ಥ ಮಾಡುವ ಬಿಜೆಪಿಯವರಿಗೆ ಕಾಂಗ್ರೆಸ್ ಕಾರ್ಯಕರ್ತರು ತಕ್ಕ ಪಾಠ ಕಲಿಸಬೇಕಿದೆ ಎಂದರು.
ಮಾಜಿ ಶಾಸಕ ಶಿರಾಜ್ ಶೇಖ್ ಮಾತನಾಡಿ, ಜಿಲ್ಲೆಯಲ್ಲಿ ಅತಿಹೆಚ್ಚು ಕಾಂಗ್ರೆಸ್ ಶಾಸಕರಿದ್ದು ಕಾಂಗ್ರೆಸ್ನ ಭದ್ರಕೋಟೆಯಾಗಿದೆ. ಪ್ರಸಕ್ತ ಉಪ ಚುನಾವಣೆಯಲ್ಲಿ ಕಾರ್ಯಕರ್ತರು ಇದನ್ನು ಸಾಬೀತುಪಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರ.ಕಾರ್ಯದರ್ಶಿ ವೆಂಕಟರಾವ್ ಘೋರ್ಪಡೆ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಆಶಾಲತಾ ಸೋಮಪ್ಪ, ತಾಲೂಕು ಅಧ್ಯಕ್ಷೆ ಈರಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಏಕಾಂಬ್ರಪ್ಪ, ಜಿ.ಪಂ.ಸದಸ್ಯ ಅಕ್ಷ ಯ್ ಲಾಡ್, ಮಾಜಿ ಸದಸ್ಯ ಎಚ್.ಲಕ್ಷ ್ಮಣ, ತಾ.ಪಂ.ಅಧ್ಯಕ್ಷೆ ಫರ್ಜಾನಾ ಗೌಸ್ ಆಜಂ, ಉಪಾಧ್ಯಕ್ಷೆ ಗಂಗಾಬಾಯಿ ಚಂದ್ರಾನಾಯ್ಕ, ಮಾಜಿ ಅಧ್ಯಕ್ಷ ಗಂಟಿ ಕುಮಾರಸ್ವಾಮಿ, ಮಾಜಿ ಉಪಾಧ್ಯಕ್ಷ ಬಿ.ಜಿ.ಉಜ್ಜನಗೌಡ, ಪುರಸಭೆ ಅಧ್ಯಕ್ಷ ಗಡಂಬ್ಲಿ ಚನ್ನಪ್ಪ, ಉಪಾಧ್ಯಕ್ಷ ಕೆ.ವಿ.ಸುರೇಶ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೆ.ಎಂ.ಋುಷಬೇಂದ್ರಯ್ಯ, ವಾಡಾ ಮಾಜಿ ಅಧ್ಯಕ್ಷ ರೋಷನ್ ಜಮೀರ್, ಯುವ ಕಾಂಗ್ರೆಸ್ ಅಧ್ಯಕ್ಷ ಆರ್.ನಾಗರಾಜ ಸೇರಿದಂತೆ ಕಾಂಗ್ರೆಸ್ ಮುಖಂಡರು ಇತರರಿದ್ದರು.
ಪಟ್ಟಣಕ್ಕೆ ಸಮೀಪದ ಕೃಷ್ಣಾನಗರದ ಲಾಡ್ ಸಹೋದರರ ಗಣಿ ಕಂಪನಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆಯನ್ನು ಉದ್ದೇಶಿಸಿ ಇತ್ತೀಚೆಗೆ ಮಾತನಾಡಿದರು. ಸಂದರಾಗಿದ್ದ ಶ್ರೀರಾಮುಲು ಮತ್ತು ಅವರ ಸಹೋದರಿ ತಮ್ಮ ಅಧಿಕಾರವಧಿಯಲ್ಲಿ ಸಂಸತ್ತಿನಲ್ಲಿ ಜಿಲ್ಲೆಯ ಪರವಾಗಿ ಎಷ್ಟುಬಾರಿ ಧ್ವನಿ ಎತ್ತಿದ್ದಾರೆ ಎಂದು ಬಹಿರಂಗ ಪಡಿಸಬೇಕು. ರೈಲ್ವೆ ಸಮಸ್ಯೆ, ಗಣಿಗಾರಿಕೆಯಿಂದಾದ ತೊಂದರೆ, ಮೂಲ ಸೌಕರ್ಯ ಅಭಿವೃದ್ಧಿಯ ವಿಷಯದಲ್ಲಿ ಅವರು ಮಾಡಿದ ಸಾಧನೆಗಳ ಹೆಜ್ಜೆ ಗುರುತುಗಳನ್ನು ತೋರಿಸಲಿ ಎಂದು ಸವಾಲು ಎಸೆದರು.
ರೈತರ ಸಾಲ ಮನ್ನಾ ಮಾಡಲು ತಯಾರಿಲ್ಲದ ಪ್ರಧಾನಿ ನರೇಂದ್ರ ಮೋದಿ ಕೈಗಾರಿಕೋದ್ಯಮಿಗಳ 2.38 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದು, ಅವರ ನಿಲುವನ್ನು ತೋರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಿಂದ ವಾರ್ಷಿಕ 12 ಲಕ್ಷ ಕೋಟಿ ರೂ. ಉಳಿತಾಯವಾದದ್ದನ್ನು ಏನು ಮಾಡಿದರು. 63 ಕೋಟಿ ರೂ.ಗಳ ಬೋಪೋರ್ಸ್ ಹಗರಣದ ಬಗ್ಗೆ ಮಾತನಾಡುವ ಪ್ರಧಾನಿ ಮೋದಿ 39 ಸಾವಿರ ಕೋಟಿ ರೂ.ಗಳ ರೆಫಲ್ ಡೀಲ್ನ್ನು ಯಾವುದೇ ಅನುಭವವಿಲ್ಲದ, ಡೀಲ್ಗೂ ಮುನ್ನ 10 ದಿನಗಳ ಹಿಂದೆ ನೋಂದಣಿಯಾದ ರಿಲಯನ್ಸ್ಗೆ ನೀಡುವ ಮೂಲಕ ಸರಕಾರಿ ಸ್ವಾಮ್ಯದ ಎಚ್ಎಎಲ್ಗೆ ಅವಮಾನ ಮಾಡಿದ್ದಾರೆ. ಇತ್ತೀಚೆಗೆ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ತೊಂದರೆಯಲ್ಲಿದೆ ಎಂದು ಹೇಳಿದ್ದಕ್ಕೆ ಮೋದಿ ಮರು ಉತ್ತರ ನೀಡಲು ಸಾದ್ಯವಾಗಿಲ್ಲ ಎಂದು ಕಿಡಿಕಾರಿದರು.
ಶಾಸಕ ಈ.ತುಕಾರಾಮ್ ಮಾತನಾಡಿ, ಶ್ರೀರಾಮುಲು 3 ಉಪ ಚುನಾವಣೆಗಳಿಗೆ ಕಾರಣರಾಗಿದ್ದಾರೆ. ಮಾಜಿ ಸಂಸದೆ ಶಾಂತಾ ಜಿಲ್ಲೆಗೆ ನೀಡಿದ ಕೊಡುಗೆ ಏನು, ಪದೇ ಪದೆ ಉಪ ಚುನಾವಣೆಗಳಿಗೆ ಕಾರಣವಾಗುವ ಮೂಲಕ ಆಡಳಿತ ವ್ಯವಸ್ಥೆಯ ಸಮಯ ವ್ಯರ್ಥ ಮಾಡುವ ಬಿಜೆಪಿಯವರಿಗೆ ಕಾಂಗ್ರೆಸ್ ಕಾರ್ಯಕರ್ತರು ತಕ್ಕ ಪಾಠ ಕಲಿಸಬೇಕಿದೆ ಎಂದರು.
ಮಾಜಿ ಶಾಸಕ ಶಿರಾಜ್ ಶೇಖ್ ಮಾತನಾಡಿ, ಜಿಲ್ಲೆಯಲ್ಲಿ ಅತಿಹೆಚ್ಚು ಕಾಂಗ್ರೆಸ್ ಶಾಸಕರಿದ್ದು ಕಾಂಗ್ರೆಸ್ನ ಭದ್ರಕೋಟೆಯಾಗಿದೆ. ಪ್ರಸಕ್ತ ಉಪ ಚುನಾವಣೆಯಲ್ಲಿ ಕಾರ್ಯಕರ್ತರು ಇದನ್ನು ಸಾಬೀತುಪಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರ.ಕಾರ್ಯದರ್ಶಿ ವೆಂಕಟರಾವ್ ಘೋರ್ಪಡೆ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಆಶಾಲತಾ ಸೋಮಪ್ಪ, ತಾಲೂಕು ಅಧ್ಯಕ್ಷೆ ಈರಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಏಕಾಂಬ್ರಪ್ಪ, ಜಿ.ಪಂ.ಸದಸ್ಯ ಅಕ್ಷ ಯ್ ಲಾಡ್, ಮಾಜಿ ಸದಸ್ಯ ಎಚ್.ಲಕ್ಷ ್ಮಣ, ತಾ.ಪಂ.ಅಧ್ಯಕ್ಷೆ ಫರ್ಜಾನಾ ಗೌಸ್ ಆಜಂ, ಉಪಾಧ್ಯಕ್ಷೆ ಗಂಗಾಬಾಯಿ ಚಂದ್ರಾನಾಯ್ಕ, ಮಾಜಿ ಅಧ್ಯಕ್ಷ ಗಂಟಿ ಕುಮಾರಸ್ವಾಮಿ, ಮಾಜಿ ಉಪಾಧ್ಯಕ್ಷ ಬಿ.ಜಿ.ಉಜ್ಜನಗೌಡ, ಪುರಸಭೆ ಅಧ್ಯಕ್ಷ ಗಡಂಬ್ಲಿ ಚನ್ನಪ್ಪ, ಉಪಾಧ್ಯಕ್ಷ ಕೆ.ವಿ.ಸುರೇಶ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೆ.ಎಂ.ಋುಷಬೇಂದ್ರಯ್ಯ, ವಾಡಾ ಮಾಜಿ ಅಧ್ಯಕ್ಷ ರೋಷನ್ ಜಮೀರ್, ಯುವ ಕಾಂಗ್ರೆಸ್ ಅಧ್ಯಕ್ಷ ಆರ್.ನಾಗರಾಜ ಸೇರಿದಂತೆ ಕಾಂಗ್ರೆಸ್ ಮುಖಂಡರು ಇತರರಿದ್ದರು.