ಆ್ಯಪ್ನಗರ

‘ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ’

ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬರವಣಿಗೆ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷ ಣಾಧಿಕಾರಿ ಪಿ.ಡಿ.ಭಜಂತ್ರಿ ಹೇಳಿದರು.

Vijaya Karnataka 11 Dec 2018, 2:45 pm
ಸಿರುಗುಪ್ಪ ; ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬರವಣಿಗೆ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷ ಣಾಧಿಕಾರಿ ಪಿ.ಡಿ.ಭಜಂತ್ರಿ ಹೇಳಿದರು.
Vijaya Karnataka Web
‘ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ’


ನಗರದ ಜ್ಞಾನಭಾರತಿ ಪ.ಪೂ.ಕಾಲೇಜಿನಲ್ಲಿ ಕಸಾಪ ತಾಲೂಕು ಘಟಕದಿಂದ ಸೋಮವಾರ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ದಾಸರು, ಶರಣರು ಹಾಗೂ ಸಂತರು ಸಮಾಜದ ಅಂಕು-ಡೊಂಕುಗಳನ್ನು ತಮ್ಮ ಸಾಹಿತ್ಯದ ಮೂಲಕ ತಿದ್ದಲು ಶ್ರಮಿಸಿದ್ದರು. ಅವರ ಸಾಹಿತ್ಯ ಇಂದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು.

ಶಿಕ್ಷ ಕ ರಾಘವೇಂದ್ರ ಮಾತನಾಡಿ, 15ನೇ ಶತಮಾನದಲ್ಲಿ ಶೈವ-ವೈಷ್ಣವರ ನಡುವಿನ ಮತಧರ್ಮದ ಸಂಘರ್ಷದ ಕಾಲದಲ್ಲಿ ಕನಕದಾಸರು ಧರ್ಮ ಸಮನ್ವಯತೆ ಸಾಧಿಸಲು ಯತ್ನಿಸಿದರು. ಕನಕದಾಸರ ಕಾಲವನ್ನು ದಾಸ ಸಾಹಿತ್ಯದ ಸುವರ್ಣಯುಗ ಎಂದು ಕರೆಯಬಹುದು ಎಂದರು. ಕುಡುದರಹಾಳು ಪೌಢಶಾಲೆಯ ಮುಖ್ಯಗುರು ಆರ್‌.ಪದ್ಮನಾಭರಾವ್‌ ಮಾತನಾಡಿದರು. ಪ್ರಾಚಾರ್ಯ ಬಿ.ಹರೀಶ್‌, ಬಸವ ಬಳಗ ತಾಲೂಕು ಘಟಕದ ಅಧ್ಯಕ್ಷ ಡಾ.ಶಿವಪ್ರಕಾಶ, ಕಸಾಪತಾಲೂಕು ಘಟಕದ ಅಧ್ಯಕ್ಷ ಎಸ್‌.ಎಂ.ನಾಗರಾಜಸ್ವಾಮಿ, ದತ್ತಿದಾನಿ ಡಿ.ಕವಿತಾ, ಉಪನ್ಯಾಸಕರಾದ ಕೆ.ಎಂ.ಚಂದ್ರಕಾಂತ, ಆರ್‌.ಗುರುರಾಯ, ಬಿ.ಆರ್‌.ಸಿ.ಯೋಗಾನಂದಯ್ಯ, ವಿಜಯರಂಗಾರೆಡ್ಡಿ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ