ಹೂವಿನಹಡಗಲಿ; ಇಂದಿನ ವಿದ್ಯಾರ್ಥಿಗಳು ಮತ್ತು ಯುವ ಜನರಿಗೆ ಮಾತ ಭಾಷಾಭಿಮಾನದ ಅಗತ್ಯವಿದೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಐಗೋಳ ಚಿದಾನಂದ ಹೇಳಿದರು.
ಪಟ್ಟಣದ ಕಾರ್ಮೆಲ್ ಜ್ಯೋತಿ ಎನ್ಜಿಓದಲ್ಲಿ ಕಸಾಪ ಶತಮಾನೋತ್ಸವ ನಿಮಿತ್ತ ತಾಲೂಕು ಕಸಾಪ ಏರ್ಪಡಿಸಿದ್ದ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ 10ನೇ ತರಗತಿ ಹಾಗೂ ಪಿಯು ವಿದ್ಯಾರ್ಥಿಗಳಿಗೆ ಕನ್ನಡ ಕುವರ ಮತ್ತು ಕುವರಿ ಪ್ರಶಸ್ತಿ ಪ್ರದಾನ ಮಾಡಿ ಶುಕ್ರವಾರ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಆಂಗ್ಲ ಭಾಷೆ ವ್ಯಾಮೋಹ ಹೆಚ್ಚಾಗುತ್ತಿದೆ. ಉನ್ನತ ವ್ಯಾಸಂಗಕ್ಕೆ ಕೇವಲ ಆಂಗ್ಲ ಭಾಷೆ ಸಾಲದು.ಜತೆಗೆ ಮಾತ ಭಾಷೆಯ ಅಗತ್ಯವಿದೆ. ಕನ್ನಡ ಶ್ರೀಮಂತವಾಗಿ ರುವುದರಿಂದ ಅತಿಹೆಚ್ಚು ಜ್ಞಾನಪೀಠ ಪ್ರಶಸ್ತಿ ಸಿಕ್ಕಿವೆ ಎಂದರು.
ಬಿಇಒ ಕೊಟ್ರೇಶ್ ಮಾತನಾಡಿ, ಭಾಷೆಯಲ್ಲಿ ಪ್ರಭುತ್ವ ಹೊಂದಿದಾಗ ಮಾತ್ರ ಸಾಧನೆ ಸಾಧ್ಯ ಎಂದರು. ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಯ್ಯನಗೌಡರ ಕೊಟ್ರಗೌಡ ಮಾತನಾಡಿ, ಪ್ರತಿಭೆಗಳನ್ನು ಗುರುತಿಸುತ್ತಿರುವ ಕಸಾಪಕ್ಕೆ ಹೆಚ್ಚು ಉತ್ತೇಜನ ಸಿಗಬೇಕಿದೆ ಎಂದರು. ಪುರಸಭೆ ಅಧ್ಯಕ್ಷ ಕೋಡಿಹಳ್ಳಿ ಕೊಟ್ರೇಶ ಮಾತನಾಡಿದರು.
ಪಟ್ಟಣದ ಕಾರ್ಮೆಲ್ ಜ್ಯೋತಿ ಎನ್ಜಿಓದಲ್ಲಿ ಕಸಾಪ ಶತಮಾನೋತ್ಸವ ನಿಮಿತ್ತ ತಾಲೂಕು ಕಸಾಪ ಏರ್ಪಡಿಸಿದ್ದ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ 10ನೇ ತರಗತಿ ಹಾಗೂ ಪಿಯು ವಿದ್ಯಾರ್ಥಿಗಳಿಗೆ ಕನ್ನಡ ಕುವರ ಮತ್ತು ಕುವರಿ ಪ್ರಶಸ್ತಿ ಪ್ರದಾನ ಮಾಡಿ ಶುಕ್ರವಾರ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಆಂಗ್ಲ ಭಾಷೆ ವ್ಯಾಮೋಹ ಹೆಚ್ಚಾಗುತ್ತಿದೆ. ಉನ್ನತ ವ್ಯಾಸಂಗಕ್ಕೆ ಕೇವಲ ಆಂಗ್ಲ ಭಾಷೆ ಸಾಲದು.ಜತೆಗೆ ಮಾತ ಭಾಷೆಯ ಅಗತ್ಯವಿದೆ. ಕನ್ನಡ ಶ್ರೀಮಂತವಾಗಿ ರುವುದರಿಂದ ಅತಿಹೆಚ್ಚು ಜ್ಞಾನಪೀಠ ಪ್ರಶಸ್ತಿ ಸಿಕ್ಕಿವೆ ಎಂದರು.
ಬಿಇಒ ಕೊಟ್ರೇಶ್ ಮಾತನಾಡಿ, ಭಾಷೆಯಲ್ಲಿ ಪ್ರಭುತ್ವ ಹೊಂದಿದಾಗ ಮಾತ್ರ ಸಾಧನೆ ಸಾಧ್ಯ ಎಂದರು. ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಯ್ಯನಗೌಡರ ಕೊಟ್ರಗೌಡ ಮಾತನಾಡಿ, ಪ್ರತಿಭೆಗಳನ್ನು ಗುರುತಿಸುತ್ತಿರುವ ಕಸಾಪಕ್ಕೆ ಹೆಚ್ಚು ಉತ್ತೇಜನ ಸಿಗಬೇಕಿದೆ ಎಂದರು. ಪುರಸಭೆ ಅಧ್ಯಕ್ಷ ಕೋಡಿಹಳ್ಳಿ ಕೊಟ್ರೇಶ ಮಾತನಾಡಿದರು.