ಆ್ಯಪ್ನಗರ

ಜಿಲ್ಲಾದ್ಯಂತ ಸಂಭ್ರಮದ ರಂಜಾನ್‌ ಹಬ್ಬ

ನಗರ ಸೇರಿದಂತೆ ಜಿಲ್ಲಾದ್ಯಂತ ಮುಸ್ಲಿಂ ಬಾಂಧವರು ಬುಧವಾರ ಶ್ರದ್ಧೆ, ಭಕ್ತಿಯಿಂದ ರಂಜಾನ್‌ ಹಬ್ಬವನ್ನು ಆಚರಿಸಿದರು.

Vijaya Karnataka 6 Jun 2019, 5:00 am
ಬಳ್ಳಾರಿ: ನಗರ ಸೇರಿದಂತೆ ಜಿಲ್ಲಾದ್ಯಂತ ಮುಸ್ಲಿಂ ಬಾಂಧವರು ಬುಧವಾರ ಶ್ರದ್ಧೆ, ಭಕ್ತಿಯಿಂದ ರಂಜಾನ್‌ ಹಬ್ಬವನ್ನು ಆಚರಿಸಿದರು.
Vijaya Karnataka Web  celebration of ramzan
ಜಿಲ್ಲಾದ್ಯಂತ ಸಂಭ್ರಮದ ರಂಜಾನ್‌ ಹಬ್ಬ


ನಾನಾ ಬಗೆಯ ತಿಂಡಿ, ತಿನಿಸುಗಳನ್ನು ಸಿದ್ಧಗೊಳಿಸಿ ಸಂಭ್ರಮದಿಂದ ಕುಟುಂಬದ ಸದಸ್ಯರು ಸ್ನೇಹಿತರು, ಬಂಧುಗಳೊಂದಿಗೆ ಸೇರಿ ಸವಿದರು.

ಬೆಳಗ್ಗೆಯಿಂದಲೇ ನಗರದ ಎಪಿಎಂಸಿ ಬಳಿಯ ಈದ್ಗಾ ಮೈದಾನಕ್ಕೆ ತೆರಳಿದ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಂ ಧರ್ಮಗುರು ಖಾಜಿ ಗುಲಾಂ ಮೊಹಮೂದ್‌ ಸಿದ್ದಿಕಿ ರಂಜಾನ್‌ ಆಚರಣೆ ಕುರಿತು ಉಪದೇಶ ನೀಡಿದರು. ಸಮಾಜದಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿದರು.

ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು. ರಂಜಾನ್‌ ಹಬ್ಬದ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಪಾಲಿಕೆಯಿಂದ ಕುಡಿವ ನೀರು ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ ್ಮಣ ನಿಂಬರಗಿ ನೇತೃತ್ವದಲ್ಲಿ ಮೈದಾನಕ್ಕೆ ತೆರಳುವ ಮಾರ್ಗದಲ್ಲಿ ಪೊಲೀಸ್‌ ಬಂದೋಬÓ್ತ… ಏರ್ಪಡಿಸಲಾಗಿತ್ತು.

ವಿಧಾನ ಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯ, ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌, ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ, ಮಾಜಿ ಶಾಸಕ ಅನಿಲ್‌ ಲಾಡ್‌, ಕಾಂಗ್ರೆಸ್‌ ಜಿಲ್ಲಾ ಸಮಿತಿ ಅಧ್ಯಕ್ಷ ಮಹಮ್ಮದ್‌ ರಫೀಕ್‌, ಹೊತೂರ್‌ ಮಹಮ್ಮದ್‌ ಇಕ್ಬಾಲ್‌, ಹನುಮ ಕಿಶೋರ್‌ ಹಾಗೂ ಇತರ ರಾಜಕೀಯ ಮುಖಂಡರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಮುಸ್ಲಿಂ ಮುಖಂಡರಿಗೆ ಹಬ್ಬದ ಶುಭಾಶಯ ಕೋರಿದರು.

...........................

ಬಿಎಲ್‌ವೈ 05 ಮಂಜು 01

ಬಳ್ಳಾರಿಯಲ್ಲಿ ಮುಸ್ಲಿಂ ಧರ್ಮಗುರುಗಳು ರಂಜಾನ್‌ ಆಚರಣೆ ಹಿನ್ನೆಲೆಯಲ್ಲಿ ಬುಧವಾರ ಉಪದೇಶ ನೀಡಿದರು.

.................

ಬಿಎಲ್‌ವೈ 05 ಮಂಜು 02

ರಂಜಾನ್‌ ಹಬ್ಬದ ನಿಮಿತ್ತ ಬಳ್ಳಾರಿಯಲ್ಲಿ ಮುಸ್ಲಿಂ ಬಾಂಧವರು ಶ್ರದ್ಧೆ, ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ