ಬಳ್ಳಾರಿ (ಕಾನಾಹೊಸಳ್ಳಿ): ರಾಷ್ಟ್ರೀಯ ಹೆದ್ದಾರಿ 50ರ ಪ್ಲೈಓವರ್ ಮೇಲೆ ನಿಂತ ಮಳೆ ನೀರಿನಿಂದಾಗಿ ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ರಸ್ತೆಯಲ್ಲಿ ಎದರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಬಾಲಕಿ ಸೇರಿ ಮೂವರು ಸ್ಥಳದಲ್ಲಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ಕಾನಾಹೊಸಳ್ಳಿ ಬಳಿ ನಡೆದಿದೆ.
ಮುದ್ದೇಬಿಹಾಳ ತಾಲ್ಲೂಕಿನ ಮಿಣಜಿಗಿ ಗ್ರಾಮದ ಕಾರ್ ಚಾಲಕ ದೇವರಾಜ್ (21), ಭೀಮರಾಯ (38), ಯಾದಗಿರಿ ಜಿಲ್ಲೆಯ ಸುರಪುರದ ಅಂಜಲಿ ದೇವಿ (14) ಮೃತ ದುರ್ದೈವಿಗಳಾಗಿದ್ದಾರೆ. ಇವರು ಬೆಂಗಳೂರಿನಿಂದ ಸ್ವಗ್ರಾಮಗಳಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಶಿವಕುಮಾರ್, ಪಿಎಸ್ಐ ನಾಗರಾಜ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಘಟನೆ ಸಂಬಂಧ ಕಾನಾಹೊಸಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆದ್ದಾರಿಯಲ್ಲಿ ನಿಂತ ನೀರು
ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಪ್ಲೈಓವರ್ ರಸ್ತೆ ನಿರ್ಮಾಣವಾಗಿದ್ದು ಮಳೆ ಬಂದ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ಸುಮಾರು ಎರಡು ಅಡಿಗಳಷ್ಟು ಮಳೆ ನೀರು ನಿಲ್ಲುತ್ತದೆ. ಇದರಿಂದ ಅಪಘಾತಗಳು ಹೆಚ್ಚಾಗಲು ಕಾರಣವಾಗಿದೆ. ಅಲ್ಲದೆ, ಹೆದ್ದಾರಿಯಲ್ಲಿ ಟ್ರಾಫಿಕ್ ಸಹ ಹೆಚ್ಚಾಗುತ್ತಿರುವುದು ಸಾಮಾನ್ಯವಾಗಿದ್ದು ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ವಲಸೆ ಕಾರ್ಮಿಕರ ಮೇಲೆ ಜವರಾಯನ ಅಟ್ಟಹಾಸ: ಮತ್ತೊಂದು ಅಪಘಾತದಲ್ಲಿ 6 ಜನ ಸಾವು!
ಮುದ್ದೇಬಿಹಾಳ ತಾಲ್ಲೂಕಿನ ಮಿಣಜಿಗಿ ಗ್ರಾಮದ ಕಾರ್ ಚಾಲಕ ದೇವರಾಜ್ (21), ಭೀಮರಾಯ (38), ಯಾದಗಿರಿ ಜಿಲ್ಲೆಯ ಸುರಪುರದ ಅಂಜಲಿ ದೇವಿ (14) ಮೃತ ದುರ್ದೈವಿಗಳಾಗಿದ್ದಾರೆ. ಇವರು ಬೆಂಗಳೂರಿನಿಂದ ಸ್ವಗ್ರಾಮಗಳಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಶಿವಕುಮಾರ್, ಪಿಎಸ್ಐ ನಾಗರಾಜ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಘಟನೆ ಸಂಬಂಧ ಕಾನಾಹೊಸಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆದ್ದಾರಿಯಲ್ಲಿ ನಿಂತ ನೀರು
ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಪ್ಲೈಓವರ್ ರಸ್ತೆ ನಿರ್ಮಾಣವಾಗಿದ್ದು ಮಳೆ ಬಂದ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ಸುಮಾರು ಎರಡು ಅಡಿಗಳಷ್ಟು ಮಳೆ ನೀರು ನಿಲ್ಲುತ್ತದೆ. ಇದರಿಂದ ಅಪಘಾತಗಳು ಹೆಚ್ಚಾಗಲು ಕಾರಣವಾಗಿದೆ. ಅಲ್ಲದೆ, ಹೆದ್ದಾರಿಯಲ್ಲಿ ಟ್ರಾಫಿಕ್ ಸಹ ಹೆಚ್ಚಾಗುತ್ತಿರುವುದು ಸಾಮಾನ್ಯವಾಗಿದ್ದು ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ವಲಸೆ ಕಾರ್ಮಿಕರ ಮೇಲೆ ಜವರಾಯನ ಅಟ್ಟಹಾಸ: ಮತ್ತೊಂದು ಅಪಘಾತದಲ್ಲಿ 6 ಜನ ಸಾವು!