ಆ್ಯಪ್ನಗರ

ಮನೆಗೆ ಪಿಲ್ಲರ್ ಹಾಕಲೆಂದು ತೋಡಿದ್ದ ಗುಂಡಿಗೆ ಬಿದ್ದು ಬಾಲಕಿ ಸಾವು

ಪಿಲ್ಲರ್ ಹಾಕಲೆಂದು ತೋಡಲಾಗಿದ್ದ ಗುಡಿಯಲ್ಲಿ ಬಾಲಕಿ ಬಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

Vijaya Karnataka Web 26 Sep 2019, 10:56 am
ಬಳ್ಳಾರಿ: ಮನೆಗೆ ಪಿಲ್ಲರ್ ಹಾಕಲೆಂದು ತೋಡಲಾಗಿದ್ದ ಬುನಾದಿಯ ಗುಂಡಿಯಲ್ಲಿ ಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿರುಗುಪ್ಪದ ಯಲ್ಲಾಲಿಂಗ ಕಾಲೋನಿಯಲ್ಲಿ ನಡೆದಿದೆ.
Vijaya Karnataka Web girl dead


ನಗರದ ನಿವಾಸಿ ಗಂಗಾಧರ ಅವರ ಪುತ್ರಿ ಬಸಮ್ಮ ಮೃತ ಬಾಲಕಿ.

ತೆಕ್ಕಲಕೋಟೆ ಪೊಲೀಸ್ ಠಾಣೆಯ ಎಎಸ್‌ಐಯೊಬ್ಬರು ಸಿರುಗುಪ್ಪದ ಯಲ್ಲಾಲಿಂಗ ನಗರದಲ್ಲಿ ಮನೆ ಕಟ್ಟಲು ಬುನಾದಿ ತೋಡಿದ್ದರು. ಕುರುಕಲು ತಿಂಡಿ ಖರೀದಿಸಲು ಅಂಗಡಿಗೆ ತೆರಳಿದ್ದ ಬಾಲಕಿ, ಮನೆಗೆ ವಾಪಸ್ ಬರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆ.

ಕಳೆದ ಎರಡುಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪಿಲ್ಲರ್ ಹಾಕಲೆಂದು ತೋಡಿದ್ದ ಗುಂಡಿಯಲ್ಲಿ ನೀರು ತುಂಬಿತ್ತು. ಬಾಲಕಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.

ಘಟನಾ ಸ್ಥಳಕ್ಕೆ ಸಿಪಿಐ ಮೌನೇಶ್ವರ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ